Advertisement

Gokak ಅನಾರೋಗ್ಯ ಕಾರಣ ಸಭೆಗೆ ಹೋಗಿಲ್ಲ: ಸತೀಶ ಜಾರಕಿಹೊಳಿ

06:29 PM Nov 04, 2023 | Team Udayavani |

ಗೋಕಾಕ: ಅನಾರೋಗ್ಯ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ನಡೆದ ಉಪಾಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸರಿಯಲ್ಲ. ವಿಶ್ರಾಂತಿ ಪಡೆಯುತ್ತಿದ್ದೇನೆ. ನನಗೆ ಆರೋಗ್ಯವೇ ಮೊದಲು. ಆಮೇಲೆ ರಾಜಕಾರಣ ಎಂದರು.

ಈ ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ. ರವಿವಾರ ಸಂಜೆ ಬೆಂಗಳೂರಿಗೆ ಹೋಗುತ್ತೇನೆ. ನಂತರ ಸಭೆಯಲ್ಲಿನ ವಿಷಯಗಳ ಬಗ್ಗೆ ಚರ್ಚಿಸುತ್ತೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next