Advertisement

ಯಡಿಯೂರಪ್ಪ ಯಾವತ್ತಾದ್ರೂ ನಿಜ ಹೇಳಿದ್ದುಂಟಾ? ಸಿಎಂ ಪ್ರಶ್ನೆ 

02:27 PM Aug 26, 2017 | Team Udayavani |

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರ ಸಾಕ್ಷ್ಯನಾಶ ಮಾಡಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್‌.ಯಡಿಯೂರಪ್ಪ ವಿರುದ್ಧ  ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದು ‘ಯಡಿಯೂರಪ್ಪ ಎಂದಾದರೂ ನಿಜ ಹೇಳಿದ್ದಾರಾ? ಅವರಿಗೆ ನಿಜ ಹೇಳುವುದು ಗೊತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. 

Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಇದೇ ವೇಳೆ ಸದ್ಯದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸ್ಪಷ್ಟನೆ ನೀಡಿದರು. ಹೈಕಮಾಂಡ್‌ ಕೂಡ ಸಂಪುಟ ವಿಸ್ತರಣೆಗೆ ಅನುಮತಿ ನೀಡಿದೆ ಎಂದರು. 

 ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿರುವುದು ಸರ್ಕಾರದ ಹೊಣೆಗಾರಿಕೆ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next