Advertisement
ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಆ್ಯಂಬುಲೆನ್ಸ್ ಲಭ್ಯವಾಗದೆ ಇದೀಗ ಮೂರು ತಿಂಗಳೇ ಕಳೆದಿದೆ. ಕಾರಣ ಕೇಳಿದರೆ ಡೀಸೆಲ್ಗೆ ಅನುದಾನವಿಲ್ಲ ಎನ್ನುವ ಉತ್ತರ ವೈದ್ಯಾಧಿಕಾರಿಗಳಿಂದ ಕೇಳಿ ಬರುತ್ತಿದೆ. ಒಂದು ತಿಂಗಳ ಹಿಂದೆ ರಾಮನಹಳ್ಳಿಯ ವ್ಯಕ್ತಿಯೊಬ್ಬರಿಗೆ ಗೋಪಾಲಪುರದಲ್ಲಿ ಅಪಘಾತವಾಗಿ ಚಿಕಿತ್ಸೆಗಾಗಿ ಶನಿವಾರಸಂತೆ ಆಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದರಾದರೂ ಆ್ಯಂಬುಲೆನ್ಸ್ ಸಿಗದೇ ಪರದಾಡ ಬೇಕಾಯಿತು.
Related Articles
Advertisement