Advertisement

Lok Sabha Election; ಭಿನ್ನಾಭಿಪ್ರಾಯಗಳು ಸಹಜ, ಟಿಕೆಟ್‌ ಘೋಷಣೆ ಬಳಿಕ ಒಗ್ಗಟ್ಟು: ಅಶೋಕ್‌

11:24 PM Mar 10, 2024 | Team Udayavani |

ಬೆಂಗಳೂರು: ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಆದರೆ ಅವು ಟಿಕೆಟ್‌ ಹಂಚಿಕೆವರೆಗೆ ಮಾತ್ರ ಇರುತ್ತವೆ. ಬಳಿಕ ಎಲ್ಲರೂ ಒಗ್ಗಟ್ಟು ತೋರಲಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಕೇಡರ್‌ ಆಧಾರಿತ ಪಕ್ಷ. ಮಾಧ್ಯಮಗಳಲ್ಲಿ ವರದಿ ಆಗುತ್ತಿರುವ ರೀತಿಯಲ್ಲಿ ದೊಡ್ಡ ಗೊಂದಲ ಗಳಿಲ್ಲ. ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಕಾರ್ಯಕರ್ತರು ಭಿನ್ನಾಭಿಪ್ರಾಯವಿಲ್ಲದೆ ನಿಷ್ಠೆಯಿಂದ ಕೆಲಸ ಮಾಡುವ ಮನೋಭಾವ ಹೊಂದಿದ್ದಾರೆ. ಪಕ್ಷ ಅಂತಿಮವಾಗಿ ಸೂಚಿಸುವ ಅಭ್ಯರ್ಥಿಗಳ ಪರವಾಗಿ ಎಲ್ಲರೂ ಕೆಲಸ ಮಾಡಲಿದ್ದಾರೆ. ಒಂದು ಬಾರಿ ಟಿಕೆಟ್‌ ಘೋಷಣೆಯಾದ ಬಳಿಕ ಎಲ್ಲರೂ ಒಂದಾಗಿ ಕೆಲಸ ಮಾಡಲಿದ್ದಾರೆ ಎಂದರು.

“ಗೋ ಬ್ಯಾಕ್‌’ ಅಭಿಯಾನದ ಬಗ್ಗೆ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿಯೂ ಇಂತಹ ಅಭಿಯಾನಗಳು ನಡೆದಿದ್ದವು. ಆದರೆ ಟಿಕೆಟ್‌ ಘೋಷಣೆ ಆಗುತ್ತಿದ್ದಂತೆ ಎಲ್ಲವೂ ಸರಿ ಹೋಯಿತು. ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಿದರು. ಕಳೆದ ಬಾರಿಯ ಫ‌ಲಿತಾಂಶ ಅದಕ್ಕೆ ಸಾಕ್ಷಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next