Advertisement

Education: ಡಿಜಿಟಲ್‌ ಯುಗದಿಂದ ಓದಿನ ಆಸಕ್ತಿ ಕಡಿಮೆ: ತಂಗಡಗಿ

11:31 PM Oct 11, 2023 | Team Udayavani |

ಬೆಂಗಳೂರು: ಪ್ರಸ್ತುತ ಡಿಜಿಟಲ್‌ ಯುಗದಿಂದ ಓದಿನ ಆಸಕ್ತಿ ಕಡಿಮೆಯಾಗುತ್ತಿದ್ದು, ಮಕ್ಕಳಲ್ಲಿ ಓದಿನ ಆಸಕ್ತಿ ಹೆಚ್ಚಿಸಬೇಕು. ಪ್ರತಿಯೊಂದು ಹಳ್ಳಿಗೂ ಪುಸ್ತಕಗಳು ತಲುಪಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್‌. ತಂಗಡಗಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಕನ್ನಡ ಪುಸ್ತಕ ಪ್ರಾಧಿಕಾರವು ನಯನ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿವಿಧ ಕೃತಿಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕ ವಿತರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ಈ ಪುಸ್ತಕ ಮುದ್ರಣಕ್ಕೆ ಈ ಬಾರಿ 42 ಲಕ್ಷ ರೂ. ಸರಕಾರದಿಂದ ಬಿಡುಗಡೆ ಮಾಡಲಾಗಿತ್ತು. ಈ ಪೈಕಿ 12 ಲಕ್ಷ ರೂ. ಉಳಿದಿದೆ. ಮುಂದಿನ ವರ್ಷ ಇನ್ನೂ ಹೆಚ್ಚಿನ ಪುಸ್ತಕ ಮುದ್ರಣ ಮಾಡಿಸಲಾಗುವುದು ಎಂದು ತಿಳಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ಚಂದ್ರಶೇಖರ ಕಂಬಾರ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next