Advertisement

ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್‌ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ

11:55 PM Oct 11, 2020 | sudhir |

ಹೊಸದಿಲ್ಲಿ: ಇನ್ನು ಗ್ರಾಮೀಣ ಜನರ ಆಸ್ತಿ ಲಪಟಾಯಿಸಲು ಯಾರಿಗೂ ಸಾಧ್ಯವಿಲ್ಲ. ಸ್ವಾಮಿತ್ವ ಯೋಜನೆಯಿಂದ ಗ್ರಾಮ ಭಾರತದ ವರ್ಚಸ್ಸು ಬದಲಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Advertisement

ಕರ್ನಾಟಕದ ಎರಡು ಸೇರಿದಂತೆ ದೇಶದ 763 ಗ್ರಾಮಗಳ 1.32 ಲಕ್ಷ ಮಂದಿಗೆ ಡಿಜಿಟಲ್‌ ಆಸ್ತಿ ಮಾಲಕತ್ವ ದಾಖಲೆಯನ್ನು ನೀಡುವ ವೀಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತ ನಾಡಿದರು. ಇದೊಂದು ಐತಿಹಾಸಿಕ ಕ್ರಮ ಎಂದು ಬಣ್ಣಿಸಿದರು.

“ಸರ್ವೇ ಆಫ್ ವಿಲೇಜಸ್‌ ಆ್ಯಂಡ್‌ ಮ್ಯಾಪಿಂಗ್‌ ವಿದ್‌ ಇಂಪ್ರೊ ವೈಸ್ಡ್ ಟೆಕ್ನಾಲಜಿ ಇನ್‌ ವಿಲೇಜ್‌ ಏರಿಯಾಸ್‌’ (ಸ್ವಾಮಿತ್ವ -SVAMI TVA) ಯೋಜನೆಯಡಿ ಮೊದಲ ಬಾರಿಗೆ ಗ್ರಾಮೀಣ ಪ್ರದೇಶದ ಜಮೀನಿನ ಅಳತೆಯನ್ನು ಡ್ರೋನ್‌ ಮೂಲಕ ನಡೆಸಲಾಗಿದೆ. ಮಾಲಕರಿಗೆ ಆಧಾರ್‌ ಮಾದರಿಯ ಕಾರ್ಡ್‌ ಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ :ಫ್ರೆಂಚ್ ಓಪನ್ : 20ನೇ ಗ್ರಾಂಡ್ ಸ್ಲಾಮ್ ಗೆದ್ದ ನಡಾಲ್! ವೃತ್ತಿ ಜೀವನದ 100ನೇ ಗೆಲುವು

ದೇಶದ ಅಭಿವೃದ್ಧಿಯಲ್ಲಿ ಆಸ್ತಿ ಮಾಲಕತ್ವ ಬಹಳ ಪ್ರಭಾವ ಬೀರು ತ್ತದೆ ಎಂದು ಜಗತ್ತಿನ ಹಲವು ತಜ್ಞರು ಪ್ರತಿಪಾದಿಸುತ್ತಿದ್ದಾರೆ.
ಜಗತ್ತಿನ ಒಟ್ಟು ಜನಸಂಖ್ಯೆ ಪೈಕಿ ಮೂರನೇ ಒಂದಂಶದಷ್ಟು ಜನರು ಮಾತ್ರ ಸೂಕ್ತ ರೀತಿಯಲ್ಲಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಹೊಂದಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ. ಮುಂದಿನ 3ರಿಂದ 4 ವರ್ಷಗಳ ಅವಧಿಯಲ್ಲಿ ದೇಶದ ಪ್ರತಿಯೊಂದು ಗ್ರಾಮದ ನಿವಾಸಿಗೂ ಇದೇ ಮಾದರಿಯ ಆಸ್ತಿ ಮಾಲಕತ್ವದ ಕಾರ್ಡ್‌ ಗಳನ್ನು ವಿತರಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ಆಸ್ತಿ ಹಕ್ಕಿನಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಯುವ ಜನತೆಗೆ ಆತ್ಮವಿಶ್ವಾಸದಿಂದ ಮುಂದಿನ ಹೆಜ್ಜೆ ಇಡಲು ನೆರವಾಗಲಿದೆ ಎಂದಿದ್ದಾರೆ.

Advertisement

ಆರು ವರ್ಷಗಳ ಅವಧಿಯಲ್ಲಿ ದೇಶದ ಗ್ರಾಮೀಣ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಲಾಗಿದೆ. ಸ್ವಾಮಿತ್ವ ಯೋಜನೆಯಿಂದಾಗಿ ಗ್ರಾಮೀಣ ಮಟ್ಟದಲ್ಲಿ ಪಂಚಾಯತ್‌ಗಳಿಗೆ ಆಸ್ತಿಯ ನಿರ್ವಹಣೆ ಸುಲಭವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದ ಬಳಿಕ ಹೆಚ್ಚಿನ ವಿವರಣೆ ನೀಡಿದ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ)ಯು, 1.32 ಲಕ್ಷ ಮಂದಿಯ ಮೊಬೈಲ್‌ ಫೋನ್‌ಗೆ ಎಸ್‌ಎಂಎಸ್‌ ಲಿಂಕ್‌ ಕಳುಹಿಸಲಾಗುತ್ತದೆ. ಅದನ್ನು ತೆರೆಯುವ ಮೂಲಕ ಆಧಾರ್‌ ಮಾದರಿಯ ಆಸ್ತಿಯ ಮಾಲಕತ್ವ ದಾಖಲೆಗಳನ್ನು ಪಡೆದುಕೊಳ್ಳಬಹುದು. ಅನಂತರದ ದಿನಗಳಲ್ಲಿ ರಾಜ್ಯ ಸರಕಾರಗಳೇ ಜಮೀನಿನ ಮಾಲಕತ್ವದ ದಾಖಲೆಗಳನ್ನು ನೀಡಲಿವೆ ಎಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next