Advertisement

Digital India: ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ

11:35 PM Aug 23, 2023 | Team Udayavani |

ಉಡುಪಿ/ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ ನವ ಭಾರತದ ನಿರ್ಮಾಣಕ್ಕಾಗಿ ಡಿಜಿಟಲ್‌ ಇಂಡಿಯಾ (ಡಿಜಿಟಲ್‌ ಇಂಡಿಯಾ ಫಾರ್‌ ನ್ಯೂ ಇಂಡಿಯಾ) ಎಂಬ ವಿಷಯದ ಕುರಿತು 18 ವರ್ಷ ಒಳಗಿನವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಮುಕ್ತವಾಗಿ ಭಾಗವಹಿಸಲು ಪತ್ರ ಲೇಖನ ಸ್ಪರ್ಧೆ ಆಯೋಜಿಸಲಾಗಿದೆ.

Advertisement

ಕನ್ನಡ, ಇಂಗ್ಲಿಷ್‌ ಅಥವಾ ಹಿಂದಿ ಭಾಷೆಯಲ್ಲಿ ಅಂತರ್‌ದೇಶಿಯ ಪತ್ರದಲ್ಲಿ 500 ಶಬ್ದಗಳಿಗೆ ಮೀರದಂತೆ ಅಥವಾ ಎ4 ಹಾಳೆಯಲ್ಲಿ ಒಂದು ಸಾವಿರ ಶಬ್ದಗಳು ಮೀರದಂತೆ ಲೇಖನವನ್ನು ಕೈಬರಹದಲ್ಲಿ ಬರೆದು, ಅಂಚೆ ಲಕೋಟೆಯಲ್ಲಿ (ಎನ್ವಲಪ್‌) ಹಾಕಿ, ಅ. 31ರೊಳಗೆ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ವಿಳಾಸಕ್ಕೆ ಸಲ್ಲಿಸಬೇಕು.

ಲೇಖನವನ್ನು ಕರ್ನಾಟಕ ವೃತ್ತದ ಚೀಫ್‌ ಪೋಸ್ಟ್ ಮಾಸ್ಟರ್‌ ಜನರಲ್‌ ಇವರನ್ನು ಉದ್ದೇಶಿಸಿ ಬರೆಯಬೇಕಾಗಿದ್ದು, ಲಕೋಟೆಯ ಮೇಲೆ “ಢಾಯೀ ಆಕರ್‌’ ಎಂದು ನಮೂದಿಸಿ, ಅದರೊಂದಿಗೆ 18 ವರ್ಷ ಮೇಲಿನವರು / 18 ವರ್ಷ ಕೆಳಗಿನವರು ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ಬರೆದು, ಸಲ್ಲಿಸಬೇಕು.

ಮಾಹಿತಿಗೆ ದೂ.ಸಂಖ್ಯೆ: 0820-2521780 ಅಥವಾ www.indiapost.gov.in ಹಾಗೂ www.karnatakapost.gov.in ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next