Advertisement

ಕಾಂಗ್ರೆಸ್‌ನಿಂದ ಡಿಜಿಟಲ್‌ ಸದಸ್ಯತ್ವ ಅಭಿಯಾನ

02:41 PM Feb 20, 2022 | Team Udayavani |

ಸಿಂಧನೂರು: ನಗರದಲ್ಲಿ ಬ್ಲಾಕ್‌ ಕಾಂಗ್ರೆಸ್‌ನಿಂದ ಡಿಜಿಟಲ್‌ ಸದಸ್ಯತ್ವ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವೀಕ್ಷ ಹನುಮನಗೌಡ ಮರಕಲ್‌ ಭೇಟಿ ಶನಿವಾರ ಪ್ರಶಂಸೆ ವ್ಯಕ್ತಪಡಿಸಿದರು.

Advertisement

ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರ ನಿವಾಸದಲ್ಲಿ ಅವರನ್ನು ಸ್ವಾಗತಿಸಿಕೊಳ್ಳಲಾಯಿತು. ಬಳಿಕ ಡಿಜಿಟಲ್‌ ಅಭಿಯಾನದ ಪ್ರಗತಿ, ಕಾರ್ಯಕ್ರಮ ನಡೆಸುತ್ತಿರುವ ಬಗೆಯನ್ನು ವಿವರಿಸಲಾಯಿತು. ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷ ಅ ಧಿಕಾರಕ್ಕೆ ಬರುವುದು ನಿಶ್ಚಿತ. ಅತಿ ಹೆಚ್ಚು ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸುವ ಕೆಲಸವಾಗಬೇಕು ಎಂದರು.

ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಸದಸ್ಯತ್ವ ಅಭಿಯಾನಕ್ಕೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಯುವಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಎಲ್ಲ ಕಡೆಯಲ್ಲೂ ಕಾಂಗ್ರೆಸ್‌ ಸದಸ್ಯತ್ವ ಸ್ವೀಕರಿಸಲು ಆಸಕ್ತಿ ತೋರುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ಉಪಾಧ್ಯಕ್ಷ ಮುರ್ತುಜಾ ಹುಸೇನ್‌, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಖಾಜಿಮಲಿಕ್‌, ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌, ನಗರಸಭೆ ಸದಸ್ಯರಾದ ಶೇಖರಪ್ಪ ಗಿಣಿವಾರ, ಎಚ್‌.ಬಾಷಾ, ಶರಣಪ್ಪ ಉಪ್ಪಲದೊಡ್ಡಿ, ಮುಖಂಡರಾದ ಚಂದ್ರಶೇಖರ ಮೇಟಿ, ರಾಜು ದತ್ತುರಾವ್‌, ಪ್ರಭುರಾಜ್‌, ವಾಗೇಶ್‌, ಬಾಬಾ, ನನ್ನುಸಾಬ್‌ ಮೇಸ್ತ್ರಿ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next