Advertisement

ದಿಗ್ವಿಜಯ್‌ ಸಿಂಗ್‌ ಬಳಿ ಸಿದ್ದರಾಮಯ್ಯ ಅಸಮಾಧಾನ

10:05 AM Feb 26, 2017 | Team Udayavani |

ಬೆಂಗಳೂರು: ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷದ ಸಂಘಟನೆ ಕಾರ್ಯಕ್ಕೆ ಬಳಸಿಕೊಳ್ಳುವ ಕೆಪಿಸಿಸಿ ಅಧ್ಯಕ್ಷರ ಏಕಪಕ್ಷೀಯ ಪ್ರಸ್ತಾಪದ ಕುರಿತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. 

Advertisement

ಭಾನುವಾರ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶನಿವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ ದಿಗ್ವಿಜಯ್‌ ಸಿಂಗ್‌ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಸಿದ್ದರಾಮಯ್ಯ, ನಾಲ್ಕು ವರ್ಷ ಸಚಿವರಾಗಿ ಕಾರ್ಯ ನಿರ್ವಹಿಸಿದವರನ್ನುಸಂಪುಟದಿಂದ ಕೈಬಿಡಬೇಕೆಂಬ ಪ್ರಸ್ತಾವದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಚುನಾವಣೆಗೆ ಒಂದು ವರ್ಷ ಬಾಕಿಯಿರುವ ಸಂದರ್ಭದಲ್ಲಿ ಈ ರೀತಿಯ ತೀರ್ಮಾನ ಕೈಗೊಂಡಲ್ಲಿ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಟಿಸುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಬಗ್ಗೆ ಇಬ್ಬರ ನಡುವೆ ಗಂಭೀರ ಚರ್ಚೆ ನಡೆಯಿತು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next