Advertisement

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

07:44 PM Mar 24, 2023 | Team Udayavani |

ಮುಂಬೈ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಭಾವಚಿತ್ರವನ್ನು ಚಪ್ಪಲಿಯಿಂದ ಒದ್ದು, ಅವಮಾನಿಸಿದವರನ್ನು ವಜಾಗೊಳಿಸಲು ಆಗ್ರಹಿಸಿ ಮಹಾರಾಷ್ಟ್ರ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯರು ಶುಕ್ರವಾರ ಕೋಲಾಹಲ ಎಬ್ಬಿಸಿದ್ದಾರೆ.

Advertisement

ಕೈ ಶಾಸಕರ ಆಗ್ರಹದಿಂದಾಗಿ ವಿಧಾನಸಭೆ ಸ್ಪೀಕರ್‌ ರಾಹುಲ್‌ ನರ್ವೇಕರ್‌ ಕಲಾಪವನ್ನು ಮೂರು ಬಾರಿ ಮುಂದೂಡಿದ್ದಾರೆ.

ಭಾರತ್‌ ಜೋಡೋ ಯಾತ್ರೆ ವೇಳೆ ರಾಹುಲ್‌ ಗಾಂಧಿ ವೀರ ಸಾವರ್ಕರ್‌ರನ್ನು ಅವಮಾನಿಸಿದ್ದನ್ನು ಖಂಡಿಸಿ, ಬಿಜೆಪಿ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಶಾಸಕರು ಪ್ರತಿಭಟನೆ ನಡೆಸಿ, ರಾಹುಲ್‌ ಭಾವಚಿತ್ರವಿರುವ ಪೋಸ್ಟರ್‌ ಮೇಲೆ ಚಪ್ಪಲಿ ಕಾಲಿಟ್ಟು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್‌ ಶಾಸಕರು ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್‌ ಭರವಸೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next