Advertisement

ದಿನೇಶ್‌ಅಮೀನ್‌ಮಟ್ಟು ಕೈ ಬಿಡಲು ಒತ್ತಡ 

12:23 PM Mar 01, 2017 | |

ಬೆಂಗಳೂರು: ದಿನೇಶ್‌ ಅಮೀನ್‌ಮಟ್ಟು ಅವರನ್ನು ಮಾಧ್ಯಮ ಸಲಹೆಗಾರ ಹುದ್ದೆಯಿಂದ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹಿರಿಯ ಸಚಿವರು ಸೇರಿ ಪಕ್ಷದ ಕೆಲವು ನಾಯಕರು ಒತ್ತಡ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಡೈರಿ ಕಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಪ್ರತಿಕ್ರಿಯೆ ವಿವಾದದ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಇಂತಹ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಲಾಗಿದೆ.

ಈ ಮಧ್ಯೆ, ಕೆಪಿಸಿಸಿ ಕಾರ್ಯದರ್ಶಿ ಜಯಸಿಂಹ ಅವರು ಮುಖ್ಯಮಂತ್ರಿಗೆ ಪತ್ರ ಬರೆದು, ಡೈರಿ ಪ್ರಕರಣದಲ್ಲಿ ಅಮೀನ್‌ಮಟ್ಟು ಅವರು ರಾಜ್ಯ ಸರ್ಕಾರ ಹಾಗೂ ಸಚಿವರ ವರ್ಚಸ್ಸಿಗೆ ಧಕ್ಕೆಯಾಗುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್‌ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಅವರನ್ನು ತಕ್ಷಣ ಮಾಧ್ಯಮ ಸಲಹೆಗಾರರ ಹುದ್ದೆಯಿಂದ ಕೈ ಬಿಡಬೇಕು ಎಂದು ಮನವಿ  ಮಾಡಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next