Advertisement

ಟೆಸ್ಟ್‌ಗೆ ಲಂಕಾ ನಾಯಕ ಗೈರು

10:17 AM Jul 22, 2017 | |

ಕೊಲಂಬೊ: ಶ್ರೀಲಂಕಾ ತಂಡದ ನಾಯಕ ದಿನೇಶ್‌ ಚಂಡಿಮಲ್‌ ಅನಾರೋಗ್ಯದಿಂದಾಗಿ ಭಾರತದೆದುರಿನ ಮೊದಲ ಟೆಸ್ಟ್‌ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಇವರ ಬದಲು ಉಪುಲ್‌ ತರಂಗ ತಂಡವನ್ನು ಮುನ್ನಡೆಸಲಿದ್ದಾರೆ. 

Advertisement

ದಿನೇಶ್‌ ಚಂಡಿಮಲ್‌ ನ್ಯುಮೋನಿಯಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ಲಭ್ಯರಿರುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು ಎಂಬುದಾಗಿ ಶ್ರೀಲಂಕಾ ಕ್ರಿಕೆಟ್‌ ಆಯ್ಕೆ ಸಮಿತಿ ಅಧ್ಯಕ್ಷ ಸನತ್‌ ಜಯಸೂರ್ಯ ಹೇಳಿದ್ದಾರೆ. ಸರಣಿಯ ಮೊದಲ ಟೆಸ್ಟ್‌ ಬುಧವಾರದಿಂದ ಗಾಲೆಯಲ್ಲಿ ಆರಂಭವಾಗಲಿದೆ.

ಪ್ರವಾಸಿ ಜಿಂಬಾಬ್ವೆ ವಿರುದ್ಧ ತಂಡದ ಹೀನಾಯ ಪ್ರದರ್ಶನದ ಬಳಿಕ ಏಂಜೆಲೊ ಮ್ಯಾಥ್ಯೂಸ್‌ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಮ್ಯಾಥ್ಯೂಸ್‌ ಬದಲು ಚಂಡಿಮಲ್‌ ಅವರನ್ನು ಟೆಸ್ಟ್‌ ತಂಡದ ನಾಯಕನನ್ನಾಗಿ, ಉಪುಲ್‌ ತರಂಗ ಅವರನ್ನು ಏಕದಿನ ತಂಡದ ನಾಯಕನನ್ನಾಗಿ ನೇಮಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next