Advertisement

ಗೋವಾದಲ್ಲಿ ಆಪ್ – ಟಿಎಂಸಿ ಪಕ್ಷಗಳಿಂದ ಬಿಜೆಪಿಗೆ ಪರೋಕ್ಷ ಬೆಂಬಲ: ದಿನೇಶ್ ಗುಂಡೂರಾವ್

05:13 PM Nov 22, 2021 | Team Udayavani |

ಪಣಜಿ: ಗೋವಾಕ್ಕೆ ಬಂದಿರುವ ಹೊಸ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಅಲ್ಲ, ಬಿಜೆಪಿ ವಿರೋಧಿ ಮತಗಳ ವಿಭಜನೆ ಮಾಡಲು ಈ ಪಕ್ಷ ಗೋವಾಕ್ಕೆ ಬಂದಿರುವಂತೆ ಕಂಡುಬರುತ್ತಿದೆ ಎಂದು ಹೇಳುವ ಮೂಲಕ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ತೃಣಮೂಲ ಕಾಂಗ್ರೇಸ್ ಪಕ್ಷವನ್ನು ಟೀಕಿಸಿದ್ದಾರೆ.

Advertisement

ಗೋವಾದ ಥಿವಿಮ್ ಮತಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಗುಂಡೂರಾವ್-ತೃಣಮೂಲ ಕಾಂಗ್ರೆಸ್ ಪಕ್ಷವು ಗೋವಾಕ್ಕೆ ಬಂದು ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ಸು ಸಾಧಿಸಿದೆ. ಇದರಿಂದಾಗಿ ಕಾಂಗ್ರೆಸ್ ಪಕ್ಷದ ಮತಗಳು ವಿಭಜನೆಯಾಗುವ ಭೀತಿ ಎದುರಾಗಿದೆ. ಈ ಮತ ವಿಭಜನೆಯ ಲಾಭ ಬಿಜೆಪಿಗೆ ಲಭಿಸುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.

ಆಮ್ ಆದ್ಮಿ ಮತ್ತು ಟಿಎಂಸಿ ಈ ಎರಡೂ ಪಕ್ಷಗಳು ಗೋವಾದಲ್ಲಿ ಬಿಜೆಪಿಯನ್ನು ಹೊಡೆದೋಡಿಸಲು ಬಂದಿಲ್ಲ. ಕಾಂಗ್ರೇಸ್ ಪಕ್ಷದ ಮತ ವಿಭಜನೆ ಮಾಡಿ ಬಿಜೆಪಿ ಪಕ್ಷಕ್ಕೆ ಸಹಾಯ ಮಾಡಲು ಬಂದಿವೆ ಎಂದು ದಿನೇಶ ಗುಂಡೂರಾವ್ ಆರೋಪಿಸಿದರು

Advertisement

Udayavani is now on Telegram. Click here to join our channel and stay updated with the latest news.

Next