Advertisement

ದಿನೇಶ್ ಗುಂಡೂರಾವ್ ಗೆ ಮುಖಭಂಗ; ಸಿಎಂ ತವರಲ್ಲೇ ಕೈ ಕಾರ್ಯಕರ್ತರಿಗೆ ಬರ

04:10 PM Jan 02, 2017 | Team Udayavani |

ಬೆಂಗಳೂರು:ಕಾಂಗ್ರೆಸ್ ಶಾಸಕ ಸ್ಥಾನ ತೊರೆದಿರುವ ನಂಜನಗೂಡು ಕ್ಷೇತ್ರದ ವಿ.ಶ್ರೀನಿವಾಸ ಪ್ರಸಾದ್ ಸೋಮವಾರ ಬಿಜೆಪಿ ಪಾಳಯ ಸೇರ್ಪಡೆಗೊಂಡಿದ್ದಾರೆ. ಮತ್ತೊಂದೆಡೆ ಶ್ರೀನಿವಾಸ್ ಪ್ರಸಾದ್ ಗೆ ಟಾಂಗ್ ಕೊಡುವ ನಿಟ್ಟಿನಲ್ಲಿ ಕಾರ್ಯಕಾರಿಣಿ ಸಭೆ ನಡೆಸಿರುವ ಕಾಂಗ್ರೆಸ್ ಪಕ್ಷ ತೀವ್ರ ಮುಖಭಂಗಕ್ಕೊಳಗಾಗಿರುವ ಘಟನೆ ನಡೆದಿದೆ.

Advertisement

ಸೋಮವಾರ ಮೈಸೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆದಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಿನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದೇ ಖಾಲಿ ಕುರ್ಚಿಗಳಿಂದಾಗಿ ದಿನೇಶ್ ಮುಜುಗರ ಅನುಭವಿಸುವಂತಾಗಿದೆ.

ಕಾರ್ಯಕಾರಿಣಿ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರು ಬಾರದ ಹಿನ್ನೆಲೆಯಲ್ಲಿ ಸಭೆಯಲ್ಲಿ ಖಾಲಿ ಕುರ್ಚಿಗಳ ಸಂಖ್ಯೆಯೇ ಜಾಸ್ತಿಯಾಗಿತ್ತು. ಇದರಿಂದಾಗಿ ದಿನೇಶ್ ಗುಂಡೂರಾವ್ ಇರಿಸು ಮುರಿಸಿಗೆ ಸಿಲುಕಿದರು.

Advertisement

Udayavani is now on Telegram. Click here to join our channel and stay updated with the latest news.

Next