Advertisement

ಅಮೃತಜ್ಯೋತಿ ಯೋಜನೆ ಹಿಂಪಡೆದ ಸರ್ಕಾರಕ್ಕೆ ಬದ್ಧತೆಯಿಲ್ಲ: ದಿನೇಶ್ ಗುಂಡೂರಾವ್ ಟೀಕೆ

10:54 AM Sep 06, 2022 | Team Udayavani |

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ಕೇವಲ 15 ದಿನದ ಹಿಂದಷ್ಟೇ ಎಸ್ ಸಿ/ಎಸ್ ಟಿ ಸಮುದಾಯದ ಬಿಪಿಎಲ್ ಕಾರ್ಡ್‌ದಾರರಿಗೆ 75 ಯುನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ ಈಗ ಏಕಾಏಕಿ ಹಿಂಪಡೆದಿದೆ. ಬೊಮ್ಮಾಯಿ ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ನಾಟಕ ಯಾಕೆ ಆಡಬೇಕು? ಕೊಟ್ಟ ಮಾತನ್ನೂ ಉಳಿಸಿಕೊಳ್ಳುವ ಬದ್ಧತೆ ಈ ಸರ್ಕಾರಕ್ಕಿಲ್ಲವೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರೆ.

Advertisement

ಉಚಿತ ವಿದ್ಯುತ್‌ಗಾಗಿ ಎಸ್ ಸಿ/ಎಸ್ ಟಿ ಸಮುದಾಯದವರು ಈ ಸರ್ಕಾರಕ್ಕೇನು ಅರ್ಜಿಯೂ ಹಾಕಿರಲಿಲ್ಲ, ಭಿಕ್ಷೆಯೂ ಬೇಡಿರಲಿಲ್ಲ.‌ ಸ್ವತಃ ಸರ್ಕಾರವೇ 75 ಯುನಿಟ್ ಉಚಿತ ವಿದ್ಯುತ್ ಯೋಜನೆ ಘೋಷಿಸಿ, ಈಗ ಸದ್ದೇ ಇಲ್ಲದೆ ವಾಪಾಸ್ ಪಡೆದಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ರಾಜಧರ್ಮ. ಈ ಬೊಮ್ಮಾಯಿ ಸರ್ಕಾರಕ್ಕೆ ತನ್ನ ಮಾತಿನ ಮೇಲೇ ನಿಲ್ಲುವ ಯೋಗ್ಯತೆಯಿಲ್ಲವೇ ಎಂದರು.

ಇದನ್ನೂ ಓದಿ:ಅಗ್ನಿ ದುರಂತದಲ್ಲಿ ನಾಲ್ವರ ಬಲಿ ಪಡೆದ ಲೆವನಾ ಹೋಟೆಲ್ ನೆಲಸಮಕ್ಕೆ ಮುಂದಾದ ಪಾಲಿಕೆ

ರದ್ದು ಮಾಡಿಲ್ಲ: ಸಚಿವ ಸುನಿಲ್‌

Advertisement

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಇಂದನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಈ ಯೋಜನೆಯಡಿ ಫಲಾನುಭವಿಗಳಿಗೆ ತಿಂಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ರದ್ದು ಪಡಿಸಲಾಗಿದೆ ಎನ್ನುವ ಮಾಹಿತಿ ಎಲ್ಲ ಕಡೆಗಳಲ್ಲೂ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಯೋಜನೆಗೆ ಸಂಬಂಧಿಸಿ ವಿಧಿಸಿದ ಕೆಲವು ನಿಯಮಗಳನ್ನು ಪರಿಷ್ಕರಿಸುವ ಉದ್ದೇಶದಿಂದ ಆಗಸ್ಟ್‌ 24ರಂದು ಹೊರಡಿಸಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆಯಲಾಗಿದೆ. ನಿಯಮಾವಳಿಗಳನ್ನು ರದ್ದುಪಡಿಸಲಾಗಿದೆಯೇ ಹೊರತು ಯೋಜನೆಯನ್ನಲ್ಲ ಎಂದು ಸ್ಪಷ್ಟಪಡಿಸಿದರು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next