Advertisement

ದೇವೇಗೌಡ ಜತೆ ಮಾತನಾಡಲು ದಿನೇಶ್‌ ಗುಂಡೂರಾವ್‌ಗೆ ಅಧಿಕಾರ

01:00 AM Feb 19, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಜೆಡಿಎಸ್‌ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ಅಧಿಕಾರ ನೀಡಲಾಗಿದೆ.

Advertisement

ಚುನಾವಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕೈಗೊಳ್ಳಲಾಗಿದ್ದು, ಸೀಟು ಹಂಚಿಕೆ ಕುರಿತಂತೆ ಎರಡು ದಿನದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಸೀಟು ಹಂಚಿಕೆ ಕುರಿತು ಶೀಘ್ರದಲ್ಲಿಯೇ ಸಭೆ ನಡೆಸುವ ಕುರಿತು ಚರ್ಚಿಸುವಂತೆ ಸೂಚಿಸಲಾಗಿದೆ.

ಇಬ್ಬರ ನಡುವಿನ ಚರ್ಚೆಯ ನಂತರ ಎರಡೂ ಪಕ್ಷಗಳ ಮುಖಂಡರು ಸಭೆ ಸೇರಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next