Advertisement

ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ ? : ದಿನೇಶ್ ಗುಂಡೂರಾವ್ ಪ್ರಶ್ನೆ

05:52 PM Aug 26, 2021 | Team Udayavani |

ಬೆಂಗಳೂರು : ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ? ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

Advertisement

ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ಹೇಳಿಕೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆಗೆ ಪ್ರತಿಕ್ರೀಯಿಸಿದ ದಿನೇಶ್ ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದಿರುವ ಅರಗ ಜ್ಞಾನೇಂದ್ರರವರೆ? ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರ ನ್ಯಾಯಕ್ಕಾಗಿ ಹೋರಾಡುವುದು ನಿಮಗೆ ರಾಜಕೀಯದಂತೆ ಕಾಣುತ್ತಿದೆಯೆ? ಹಾಗಾದರೆ ನಿಮ್ಮ ಪಕ್ಷ ಅತ್ಯಾಚಾರಿಗಳ ಪರವೋ ಅಥವಾ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರವೋ.? ಎಂದು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್‌ಗೆ ರಾಜಕೀಯದ ಪಾಠ ಮಾಡುವ ಆರಗ ಜ್ಞಾನೇಂದ್ರರವರು,ಇವರದ್ದೇ ಕ್ಷೇತ್ರ ತೀರ್ಥಹಳ್ಳಿಯಲ್ಲಿ 2015 ರಲ್ಲಿ ನಡೆದ ನಂದಿತಾ ಸಾವಿನ ಪ್ರಕರಣದಲ್ಲಿ ಪೊಲೀಸರಿಂದ ಜಾರ್ಜ್‌ಶೀಟ್ ಹಾಕಿಸಿಕೊಂಡಿದ್ಯಾಕೆ? ಅಂದು ಗಲಭೆ ಎಬ್ಬಿಸಿದ್ದು ರಾಜಕೀಯವಲ್ಲವೆ?

ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ?

ಇದನ್ನೂ ಓದಿ :ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಆರಗ ಜ್ಞಾನೇಂದ್ರ

Advertisement

 

Advertisement

Udayavani is now on Telegram. Click here to join our channel and stay updated with the latest news.

Next