Advertisement

ದಿನೇಶ್‌ ಗುಂಡೂರಾವ್‌ ವಿರುದ್ಧ ಅಶ್ಲೀಲ ಪೋಸ್ಟ್‌ ಹಾಕಿದವನ ಸೆರೆ

07:32 AM Mar 21, 2019 | |

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಅವರ
ಪತ್ನಿ ಬಗ್ಗೆ ಅಶ್ಲೀಲ ಹೇಳಿಕೆಗಳನ್ನು ಪ್ರಕಟಿಸಿದ ಆರೋಪಿಯನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

Advertisement

ಆರ್‌.ಟಿ.ನಗರ ನಿವಾಸಿ ಆರ್‌.ಮಲ್ಲಿಕಾರ್ಜುನ (41) ಬಂಧಿತ. ಆರೋಪಿ ಯಿಂದ ಒಂದು ಮೊಬೈಲ್‌ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ದಿನೇಶ್‌ ಗುಂಡೂರಾವ್‌ ಅವರ ಬಳಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಮಲ್ಲಿಕಾರ್ಜನ, ಇತ್ತೀಚೆಗೆ ಬೇಸರಗೊಂಡು ಕೆಲಸ ತೊರೆದು, ಬೇರೆಡೆ ಕೆಸಲಕ್ಕೆ ಸೇರಿಕೊಂಡಿದ್ದಾನೆ. ಈ ಮಧ್ಯೆ ಕೆಲ ದಿನಗಳ ಹಿಂದೆ
ಆರೋಪಿಯು, “ಆರ್‌.ಮಲ್ಲಿಕಾರ್ಜನ್‌’ ಹೆಸರಿನಲ್ಲಿರುವ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ದಿನೇಶ್‌ ಗುಂಡೂರಾವ್‌ ಹಾಗೂ ಅವರ ಪತ್ನಿ ತಬೂರಾವ್‌ ಬಗ್ಗೆ ಅಶ್ಲೀಲ ಸಂದೇಶಗಳನ್ನು ಪ್ರಕಟಿಸಿ ಮಾನಸಿಕ ಕಿರಿಕಿರಿ ಉಂಟು ಮಾಡುತ್ತಿದ್ದ.

ಅಷ್ಟೇ ಅಲ್ಲದೆ, ಆತ ಈ ರೀತಿಯ ಪೋಸ್ಟ್‌ಗಳ ಮೂಲಕ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕಶ್ಯಪ್‌ ನಂದನ್‌ ಎಂಬುವವರು ಆರೋಪಿಯ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನಗರದ ಖಾಸಗಿ ಆಸ್ಪತ್ರೆ ಬಳಿ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸೈಬರ್‌ ಕ್ರೈಂ ಪೊಲೀಸರು ಹೇಳಿದರು.

“ನನ್ನ ಕಷ್ಟದ ಸಂದರ್ಭದಲ್ಲಿ ದಿನೇಶ್‌ ಗುಂಡೂರಾವ್‌ ಅವರು ಸಹಾಯ ಮಾಡಲಿಲ್ಲ. ಹೀಗಾಗಿ ಈ ರೀತಿ ಕೃತ್ಯ ಎಸಗಿದ್ದೇನೆ’ ಎಂದು ಆರೋಪಿ ಹೇಳಿಕೆ ನೀಡಿರುವುದಾಗಿ ಸೈಬರ್‌ ಕ್ರೈಂ ಪೊಲೀಸರು ಮಾಹಿಸಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next