Advertisement
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಹೀನಾಯ ಸೋಲು ಕಂಡ ನಂತರ ರಾಹುಲ್ ಗಾಂಧಿ ಸೋಲಿನ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು. ಆದರೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅವರ ರಾಜೀನಾಮೆಯನ್ನು ಅಂಗೀಕರಿಸದೇ ಅಧ್ಯಕ್ಷರಾಗಿ ಮುಂದುವರಿಯುವಂತೆ ಮನವಿ ಮಾಡಿತ್ತು. ಅಲ್ಲದೇ ರಾಷ್ಟ್ರದ ಎಲ್ಲ ರಾಜ್ಯಗಳ ಕಾಂಗ್ರೆಸ್ ಕಾರ್ಯಕರ್ತರಿಂದ ಹಿಡಿದು ಹಿರಿಯ ನಾಯಕರವರೆಗೂ ರಾಹುಲ್ ಗಾಂಧಿಯೇ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಒತ್ತಡವಿ ದ್ದರೂ, ರಾಹುಲ್ ನಿಲುವು ಬದಲಿಸದೇ ತಮ್ಮ ನಿರ್ಧಾರಕ್ಕೆ ಬದ್ಧರಾಗಿ ಹುದ್ದೆಯಿಂದ ನಿರ್ಗಮಿಸಿದ್ದಾರೆ.
Related Articles
Advertisement
ರಾಹುಲ್ ನಡೆ ಮೇಲೆ ನಿರ್ಧಾರ: ರಾಜ್ಯದಲ್ಲಿ ಹೀನಾಯ ಸೋಲು ಕಂಡ ತಕ್ಷಣ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಎಚ್.ಕೆ. ಪಾಟೀಲ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಬೆನ್ನಲ್ಲೇ ದಿನೇಶ್ ಕೂಡ ನೈತಿಕ ಹೊಣೆ ಹೊರುವುದಾಗಿ ಘೋಷಿಸಿದ್ದರು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೂ ಮುಂದಾಗಿದ್ದರು. ಆದರೆ, ರಾಹುಲ್ ಗಾಂಧಿ ರಾಜೀನಾಮೆ ಹಿಂಪಡೆಯುವಂತೆ ರಾಷ್ಟ್ರ ಮಟ್ಟದಲ್ಲಿ ಒತ್ತಡ ಕೇಳಿ ಬಂದಿದ್ದರಿಂದ ಅವರ ನಿರ್ಧಾರದ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದರು ಎಂದು ಹೇಳಲಾಗುತ್ತಿದೆ.
ನೈತಿಕತೆಯ ತೂಗುಕತ್ತಿ: ರಾಹುಲ್ ಗಾಂಧಿ ರಾಜೀನಾಮೆ ನೀಡಿ, ಹುದ್ದೆಯಿಂದ ನಿರ್ಗಮಿಸಿದ್ದರಿಂದ ಕೆಪಿಸಿಸಿ ಅಧ್ಯಕ್ಷರೂ ನೈತಿಕ ಹೊಣೆ ಹೊತ್ತು ಸ್ಥಾನ ತ್ಯಾಗ ಮಾಡಬೇಕೆಂಬ ಆಗ್ರಹ ರಾಜ್ಯ ಕಾಂಗ್ರೆಸ್ನಲ್ಲಿ ಕೇಳಿ ಬರುತ್ತಿದೆ. ಸದ್ಯ ವಿದೇಶ ಪ್ರವಾಸ ಕೈಗೊಂಡಿರುವ ದಿನೇಶ್ ಗುಂಡೂರಾವ್, ರಾಜ್ಯಕ್ಕೆ ವಾಪಸ್ ಬಂದ ಮೇಲೆ ತಾವೂ ನೈತಿಕ ಜವಾಬ್ದಾರಿ ಹೊತ್ತು ಹುದ್ದೆಯಿಂದ ನಿರ್ಗಮಿಸುತ್ತಾರಾ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಬೇರೆ ರಾಜ್ಯಗಳ ಪಿಸಿಸಿ ಅಧ್ಯಕ್ಷರ ರಾಜೀನಾಮೆಲೋಕಸಭೆ ಚುನಾವಣೆಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಒಂದೇ ಸ್ಥಾನ ಪಡೆದಿದೆ. ಇದರ ಪರಿಣಾಮ ಮಹಾರಾಷ್ಟ್ರ, ಉತ್ತರ ಪ್ರದೇಶ, ದೆಹಲಿ, ಒರಿಸ್ಸಾ, ಛತ್ತೀಸ್ಘಡ್ ಸೇರಿ ಎಂಟು ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ರಾಜ್ಯದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಕೂಡ ನೈತಿಕ ಜವಾಬ್ದಾರಿ ಹೊರಬೇಕು ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ.