Advertisement

ಭಾರಿ ಗಾಳಿಗೆ ಮೀನುಗಾರ ಸಹಿತ ಪಾತಿ ದೋಣಿ ನಾಪತ್ತೆ: ಹುಡುಕಾಟ ಆರಂಭ

01:19 PM Sep 08, 2020 | keerthan |

ಮಂಗಳೂರು: ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಜತೆಗಿದ್ದ ಪಾತಿ (ಸಣ್ಣ ದೋಣಿ) ಯೊಂದು ಭಾರಿ ಗಾಳಿಗೆ ಸಿಲುಕಿ ಓರ್ವ ಮೀನುಗಾರ ಸಹಿತ ನಾಪತ್ತೆಯಾದ ಘಟನೆ ರವಿವಾರ ತಡರಾತ್ರಿ ನಡೆದಿದೆ.

Advertisement

ಉಳ್ಳಾಲ ಹೊಗೆ ನಿವಾಸಿ ಆರ್ಥರ್‌ ಸುನಿಲ್‌ ಕುವೆಲ್ಲೋ (45) ನಾಪತ್ತೆಯಾದವರು.

ಪರ್ಸಿನ್‌ ಬೋಟ್‌ನಲ್ಲಿ ಉಳ್ಳಾಲ ಉಳಿಯದ 29 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಬೆಳಗ್ಗೆ ಸುಮಾರು 11.30ಕ್ಕೆ ಬೋಟ್‌ನ ಬೆಲ್ಟ್ ತುಂಡಾಗಿದ್ದು, ಈ ಸಂದರ್ಭದಲ್ಲಿ ಸಮುದ್ರಕ್ಕೆ ಬೀಸಿದ್ದ ಬಲೆ ಸಂಪೂರ್ಣ ಮುದ್ದೆಯಾಗಿತ್ತು. ಮೀನುಗಾರರು ರಾತ್ರಿ ವರೆಗೆ ಬಲೆಯನ್ನು ಬಿಡಿಸುವ ಕಾಯಕದಲ್ಲಿ ತೊಡಗಿದ್ದರು. ರಾತ್ರಿ 12 ಗಂಟೆ ಸುಮಾರಿಗೆ ಗಾಳಿ ಮಳೆ ಹೆಚ್ಚಾಗಿ ಬೋಟ್‌ಗೆ ಕಟ್ಟಿದ್ದ ಪಾತಿ ಹಗ್ಗ ತುಂಡಾಗಿ ಸಮುದ್ರ ಪಾಲಾಯಿತು.

ಸುನಿಲ್‌ ಅವರು ಬಲೆ ಎಳೆಯಲೆಂದು ಪಾತಿಯಲ್ಲಿ ಕುಳಿತಿದ್ದರು. ಮಬೋಟ್‌ನ ತಾಂತ್ರಿಕ ತೊಂದರೆಯಿಂದಾಗಿ ರಕ್ಷಿಸಲು ಸಾಧ್ಯವಾಗಿಲ್ಲ. ಸೋಮವಾರ ಹಗಲಿಡೀ ಸಮುದ್ರದಲ್ಲಿ ಹುಡುಕಾಡಿದ್ದು ರಾತ್ರಿ ನಾಪತ್ತೆ ಪ್ರಕರಣ ದಾಖಲಿಸಲಾಗಿದೆ. ಕರಾವಳಿ ಕಾವಲು ಪಡೆಗೂ ಮಾಹಿತಿ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next