Advertisement

ಕಾಂಗ್ರೆಸ್ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ ನಿರ್ದೇಶಕ ಎಸ್. ನಾರಾಯಣ್

07:29 PM Nov 16, 2022 | Team Udayavani |

ಬೆಂಗಳೂರು : ಖ್ಯಾತ ಚಿತ್ರ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್ ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಯಸಿ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.

Advertisement

ರಾಜಾಜಿನಗರ ಸದ್ಯ ಬಿಜೆಪಿಯ ಭದ್ರ ಕೋಟೆ ಎನ್ನುವ ಸ್ಥಿತಿಯಿದ್ದು, ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದಾರೆ. 2008 ರಿಂದ ನಿರಂತರವಾಗಿ ಮೂರು ಬಾರಿ ಸುರೇಶ್ ಕುಮಾರ್ ಅವರು ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. 2018 ರಲ್ಲಿ ಜಿ. ಪದ್ಮಾವತಿ ಅವರು ಸುರೇಶ್ ಕುಮಾರ್ ವಿರುದ್ದ ಸೋಲು ಅನುಭವಿಸಿದ್ದರು.

ಮಾರ್ಚ್ ತಿಂಗಳಿನಲ್ಲಿ ಎಸ್‌.ನಾರಾಯಣ್‌ ಅವರು ತಮ್ಮ ಪುತ್ರ ನಟ ಪಂಕಜ್‌ ನಾರಾಯಣ್‌ ಜತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next