Advertisement

ಭಿನ್ನಾಭಿಪ್ರಾಯ ಅಭಿವೃದ್ಧಿ ಮೇಲೆ ಪರಿಣಾಮ ಬೀರಲ್ಲ

11:16 PM Jun 16, 2019 | Team Udayavani |

ಬೆಳಗಾವಿ: “ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಇದ್ದರೂ ರಾಜ್ಯದ ಅಭಿವೃದ್ಧಿ ಮೇಲೆ ಪರಿಣಾಮ ಉಂಟಾಗಿಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯವಿದೆ ಎಂದ ಮಾತ್ರಕ್ಕೆ ರಾಜ್ಯದ ಅಭಿವೃದ್ಧಿಯನ್ನು ನಿಲ್ಲಿಸಲು ಬರಲ್ಲ. ಸರ್ಕಾರದಲ್ಲಿ ಕೇವಲ ಶೇ.10 ಭಿನ್ನಾಭಿಪ್ರಾಯವಿದ್ದು, ವರಿಷ್ಠರು ಅದನ್ನು ನಿಭಾಯಿಸುತ್ತಿದ್ದಾರೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ: ಸರಕಾರ ಈಗಾಗಲೇ ಐಎಂಎ ಪ್ರಕರಣವನ್ನು ಎಸ್‌ಐಟಿಗೆ ನೀಡಿದೆ. ಯಾರೂ ದೊಡ್ಡ ಹಗರಣಕ್ಕೆ ಆಸ್ಪದ ನೀಡಿ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಷ್ಟು ಮೀರಿ ಇದಕ್ಕೆ ಅನುಮತಿ ನೀಡಿದ ಸರ್ಕಾರ ಯಾವುದು ನೀವೇ ಹೇಳಿ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next