Advertisement

ಬಿಜೆಪಿಯೇ ನನ್ನ ಪರವಾಗಿ ಕೆಲಸ ಮಾಡಿಲ್ಲ!: ಗೆದ್ದ ಬಳಿಕ ಮಾನ್ಸೆರೇಟ್ ಬಾಂಬ್

12:53 PM Mar 10, 2022 | Team Udayavani |

ಪಣಜಿ : ಫಲಿತಾಂಶಕ್ಕೆ ಸಂಬಂಧಿಸಿದಂತೆ ನಿರಾಶೆಯಾಗಿದೆ. ಬಿಜೆಪಿ ಕಾರ್ಯಕರ್ತರು ನನಗಾಗಿ ಕೆಲಸ ಮಾಡಿಲ್ಲ ಎಂದು ಗೋವಾದ ಪಣಜಿ ಕ್ಷೇತ್ರದ ವಿಜೇತ ಅಭ್ಯರ್ಥಿ ಅಟಾನಾಸಿಯೊ ಮಾನ್ಸೆರೇಟ್ ಗುರುವಾರ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ಮತ ಎಣಿಕೆ ಕೇಂದ್ರದ ಹೊರಗೆ ಗೆಲುವು ಖಾತ್ರಿಯಾಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಲಿತಾಂಶಕ್ಕೆ ಸಂಬಂಧಿಸಿದಂತೆ ನಿರಾಶೆಯಾಗಿದೆ. ಬಿಜೆಪಿ ಕಾರ್ಯಕರ್ತರು ನನಗಾಗಿ ಕೆಲಸ ಮಾಡಿಲ್ಲ, ಆಪ್ ಅಭ್ಯರ್ಥಿಗಾಗಿ ಕೆಲಸ ಮಾಡಿದ್ದಾರೆ ಎಂದು ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ನಾನು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಹೋರಾಡಿದೆ. ಕೆಲವು ಕಾರ್ಯಕರ್ತರು ಮತ್ತು ಬೆಂಬಲಿಗರ ಬಲದಿಂದಾಗಿ ನಾನು ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೇ ಎಂದು ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರು ನನ್ನನ್ನು ಪಕ್ಷಕ್ಕೆ ಒಪ್ಪಿಕೊಂಡಿಲ್ಲ. ನಾನು ಆ ರೀತಿಯಲ್ಲಿ ನೋಡುತ್ತೇನೆ. ಇದರಿಂದಾಗಿ ಉತ್ಪಲ್ ಪರಿಕ್ಕರ್ ಇಷ್ಟು ಮತಗಳನ್ನು ಪಡೆಯಲು ಸಾಧ್ಯವಾದರೆ, ಕಾರ್ಯಕರ್ತರು ತಮ್ಮ ಮತಗಳನ್ನು ಅವರಿಗೆ ವರ್ಗಾಯಿಸಿದ ಕಾರಣ. ಇಲ್ಲಿನ ಬಿಜೆಪಿ ನಾಯಕತ್ವವು ಡ್ಯಾಮೇಜ್ ಕಂಟ್ರೋಲ್ ಮಾಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಕ್ಷೇತ್ರದಲ್ಲಿ ಉತ್ಪಲ್ ಪರ್ರಿಕರ್ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾನ್ಸೆರೇಟ್ ಅವರಿಗೆ ಸೆಡ್ಡು ಹೊಡೆದಿದ್ದರು. ಕ್ಷೇತ್ರ ದೇಶದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next