Advertisement

ಹುಣಸೋಡು ದುರ್ಘಟನೆ: ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

01:52 PM Jan 23, 2021 | Team Udayavani |

ಶಿವಮೊಗ್ಗ: ಹುಣಸೋಡು ಗ್ರಾಮದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಸರ್ಕಾರದ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

Advertisement

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಅಬ್ಬಲಗೆರೆ ಗ್ರಾಮದ ಹಣಸೋಡು ಗ್ರಾಮದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶಿವಮೊಗ್ಗ- ಶಿಕಾರಿಪುರ- ತಡಸ ರಾಷ್ಟ್ರೀಯ ಹೆದ್ದಾರಿ ತಡೆದು ಕಾಂಗ್ರೆಸ್ಸಿಗರು  ಪ್ರತಿಭಟನೆ ನಡೆಸಿದರು.  ರಸ್ತೆ ತಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದ ಸರ್ಕಾರದ ವಿರುದ್ಧ ಈ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಾತ್ರವಲ್ಲದೆ  ಸಿಎಂ ಬಿಎಸ್ ಯಡಿಯೂರಪ್ಪ  ಹಾಗೂ ಉಸ್ತುವಾರಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿ:  ಭಾರತದಲ್ಲಿ ಬಿಡುಗಡೆಗೊಂಡಿದೆ “ಟಾಟಾ ಆಲ್ಟ್ರೊಜ್ ಐಟರ್ಬೊ”

Advertisement
Advertisement

Udayavani is now on Telegram. Click here to join our channel and stay updated with the latest news.

Next