Advertisement

Politics: ಬಸವರಾಜ ಬೊಮ್ಮಾಯಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

08:42 PM Oct 24, 2023 | Team Udayavani |

ಬೆಂಗಳೂರು: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಚೇತರಿಸಿಕೊಂಡು ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

Advertisement

ಭಾನುವಾರವೇ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ. ರಾಜೇಶ್‌, ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌ ಸೇರಿದಂತೆ ಇನ್ನಿತರರು ಆರೋಗ್ಯ ವಿಚಾರಿಸಿದರಲ್ಲದೆ, ಶೀಘ್ರ ಗುಣಮುಖರಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗುವಂತೆ ಹಾರೈಸಿದರು.

ಮಂಗಳವಾರ ಮಾಜಿ ಸಿಎಂ ಬಿ.ಎಸ್‌. ಯಡಿಯೂಪ್ಪ, ಸಂಸದ ಶಿವಕುಮಾರ್‌ ಉದಾಸಿ ಸೇರಿದಂತೆ ಪಕ್ಷದ ಇನ್ನಿತರ ಮುಖಂಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕನಿಷ್ಠ 1 ತಿಂಗಳಾದರೂ ವಿಶ್ರಾಂತಿಯ ಅಗತ್ಯವಿದೆ ಎಂಬುದನ್ನು ವೈದ್ಯರು ಸಲಹೆ ಮಾಡಿದ್ದು, ಅಧಿವೇಶನದವರೆಗೆ ವಿಶ್ರಾಂತಿಯಲ್ಲಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next