Advertisement

ವಿದ್ಯುತ್‌ ಪರಿವರ್ತಕ ಸ್ಥಳಾಂತರಿಸಿ

11:59 AM Apr 24, 2022 | Team Udayavani |

ಚಿಂಚೋಳಿ: ತಾಲೂಕಿನ ಕೊರಡಂಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ವಿದ್ಯುತ್‌ ಪರಿವರ್ತಕದಿಂದ ಆಗಾಗ ಬೆಂಕಿ ಕಿಡಿ ಹಾರುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅಪಾಯಕಾರಿಯಾಗಿದ್ದು, ಕೂಡಲೇ ಸ್ಥಳಾಂತರಿಸಬೇಕು ಎಂದು ಶಾಲೆಯ ಮುಖ್ಯಶಿಕ್ಷಕ ಶ್ರೀಶೈಲ ನಾಗಾವಿ ಜೆಸ್ಕಾಂ ಎಇಇಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Advertisement

ಕೊರಡಂಪಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಅನೇಕ ವರ್ಷಗಳಿಂದ ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಪರಿವರ್ತಕ ಅಳವಡಿಸಲಾಗಿದೆ. ಶಾಲೆಯ ವಿದ್ಯಾರ್ಥಿಗಳು ವಿರಾಮದ ವೇಳೆ ಮೂತ್ರ ವಿಸರ್ಜನೆ ಮಾಡಲು ಇದೇ ಜಾಗದ ಬಳಿಬರುತ್ತಿದ್ದಾರೆ. ಒಮ್ಮೊಮ್ಮೆ ವಿದ್ಯುತ್‌ ಪೂರೈಕೆಯಲ್ಲಿ ಹೆಚ್ಚಿನ ಲೋಡ್‌ ಆದ ವೇಳೆ ಬೆಂಕಿ ಕಿಡಿ ಹೊತ್ತಿಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಇದೇ ಟಿಸಿಯಿಂದ ವಿದ್ಯುತ್‌ ಸ್ಪರ್ಶವಾಗಿ ಈಗಾಗಲೇ ಕೆಲವು ಆಡು, ಕುರಿ, ಎಮ್ಮೆ, ಆಕಳುಗಳು ಮೃತಪಟ್ಟಿವೆ. ಆದ್ದರಿಂದ ಜೆಸ್ಕಾಂ ಎಇಇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕೂಡಲೇ ವಿದ್ಯುತ್‌ ಪರಿವರ್ತಕ ಸ್ಥಳಾಂತರಿಸಬೇಕೆಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next