Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರೋತ್ಥಾನ ಯೋಜನೆಯಲ್ಲಿ ತಾರತಮ್ಯ ಮಾಡ ಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾಗುತ್ತಿರುವ ಯೋಜನೆ ಗಳನ್ನು ರದ್ದುಪಡಿಸ ಲಾಗುತ್ತಿದೆ. ಇದೆಲ್ಲವೂ ದ್ವೇಷದ ರಾಜಕಾರಣ. ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದು ಮತ್ತು ಅಧಿಕಾರದಲ್ಲಿ ಇರಬೇಕು ಎನ್ನುವುದಷ್ಟೇ ಅವರ ಸಿದ್ಧಾಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
ಮೈಸೂರು: ಸಿಎಂ ಯಡಿಯೂರಪ್ಪ ಮಾತನಾಡಿರುವ ಆಡಿಯೋ ಸಂಬಂಧ ರಾಷ್ಟ್ರಪತಿಗೆ ದೂರು ನೀಡಲು ಸಮಯ ಕೋರಲಾಗಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದ ರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ನವರು “ಆಪರೇಷನ್ ಕಮಲ’ಕ್ಕೆ ಸಂಬಂಧಿಸಿದಂತೆ ಎಲ್ಲವನ್ನೂ ಹೇಳಿರುವ ಆಡಿಯೋ ವೈರಲ್ ಆಗಿದೆ.
Advertisement
ಅಮಿತ್ ಶಾ ಸೂಚನೆಯಂತೆ “ಆಪ ರೇಷನ್ ಕಮಲ’ ಮಾಡಿರುವುದಾಗಿ ಯಡಿಯೂರಪ್ಪ ಆಡಿಯೋದಲ್ಲಿ ಹೇಳಿದ್ದಾರೆ. “ಆಪರೇಷನ್ ಕಮಲ’ ಮಾಡಿರುವ ಅಮಿತ್ ಶಾ ಮಂತ್ರಿಯಾಗಿರಬಾರದು. ಅನೈತಿಕವಾಗಿ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಬಾರದು. ಹೀಗಾಗಿ, ಇವರಿಬ್ಬರನ್ನೂ ವಜಾಗೊಳಿಸಿ ಎಂದು ರಾಷ್ಟ್ರಪತಿಯವರಿಗೆ ದೂರು ನೀಡುತ್ತೇವೆ ಎಂದರು.
ಟಿಪ್ಪು ಜಯಂತಿ ಆಚರಣೆಗೆ ರಾಜ್ಯದ ಜನರ ವಿರೋಧವಿಲ್ಲ. ನ್ಯಾಯಾಲಯ ಕೂಡ ಖಾಸಗಿಯಾಗಿ ಆಚರಣೆಗೆ ಅಡ್ಡಿ ಇಲ್ಲ ಎಂದು ಹೇಳಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ದಾರವಿಲ್ಲದೆ ಬುಗುರಿ ಆಡಿಸುತ್ತಿದೆ.-ಸಿದ್ದರಾಮಯ್ಯ, ಮಾಜಿ ಸಿಎಂ