Advertisement

Cauvery; ತಮಿಳುನಾಡಿಗೆ ಮತ್ತೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ: ಸಿದ್ದರಾಮಯ್ಯ

07:01 PM Sep 26, 2023 | Team Udayavani |

ಮೈಸೂರು: ಸಿಡ್ಲ್ಯೂಆರ್ ಸಿ ಮುಂದಿನ 18 ದಿನ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ಬಿಡಲು ಸೂಚಿಸಿದೆ. ಈ ಬಗ್ಗೆ ಇನ್ನೂ ಕಾನೂನು ತಜ್ಞರ ಜೊತೆ ಚರ್ಚೆ ಮಾಡಬೇಕಿದೆ. ಚರ್ಚೆ ಬಳಿಕ ಸರ್ಕಾರದ ನಿರ್ಧಾರ ತಿಳಿಸುತ್ತೇವೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಇನ್ನೂ ಸೆ.27 ರ ವರೆಗೆ ಕಾಲಾವಕಾಶವಿದೆ. ಸಿಡ್ಲ್ಯೂಸಿ ಆದೇಶ ಇರುವುದು ಸೆ.28 ರಿಂದ 18 ದಿನ. ಹೀಗಾಗಿ ನಮ್ಮ ತೀರ್ಮಾನ ತೆಗೆದುಕೊಳ್ಳಲು ಇನ್ನೂ ಸಮಯವಿದೆ ಎಂದರು.

ಕಾವೇರಿ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next