Advertisement

ಕೈಗಾರಿಕೆಗಳಿಗೆ ನೀರು ಪೂರೈಕೆ ದರ ಪರಿಷ್ಕರಣೆಗೆ ಚರ್ಚೆ

07:38 AM Nov 14, 2018 | Team Udayavani |

ಬೆಂಗಳೂರು: ಕೈಗಾರಿಕೆಗಳಿಗೆ ನದಿಗಳಿಂದ ನೀರು ಪೂರೈಸುವ ದರವನ್ನು ಕಡಿಮೆ ಮಾಡುವಂತೆ ಕೈಗಾರಿಕೋದ್ಯಮಿಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್‌ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹಾಗೂ ಎರಡೂ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದರು.

Advertisement

ರಾಜ್ಯ ಸರ್ಕಾರ ಕೈಗಾರಿಕೆಗಳಿಗೆ ನೀರು ಪೂರೈಸಲು ದರ ಹೆಚ್ಚಳ ಮಾಡಿದ್ದು, ಅದನ್ನು ಕಡಿಮೆ ಮಾಡುವಂತೆ ಕೈಗಾರಿಕೋದ್ಯ ಮಗಳು ಮನವಿ ಮಾಡಿದ್ದು ಈ ಕುರಿತು ಕೈಗಾರಿಕಾ ಸಚಿವರು ಹಾಗೂ ಜಲ ಸಂಪನ್ಮೂಲ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್‌ ಮತ್ತೂಂದು ಬಾರಿ ಕೈಗಾರಿಕೋದ್ಯಮಿಗಳ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಸಭೆ ಸೇರಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ
ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next