Advertisement

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ: ಡಾ|ಪರಮೇಶ್ವರ್‌

10:15 AM Apr 29, 2018 | Team Udayavani |

ಪಣಂಬೂರು: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ರಾಜ್ಯ ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್‌ ಹೇಳಿದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮೊಯಿದಿನ್‌ ಬಾವಾ ಅವರ ಜತೆ ರವಿವಾರ ರಾತ್ರಿ ಪಕ್ಷದ ಚುನಾವಣಾ ಪ್ರಚಾರದ ಕುರಿತು ಚರ್ಚೆ ನಡೆಸಿದರಲ್ಲದೆ ಪಂಜಿಮೊಗರು, ಕಾವೂರಿನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Advertisement

ಮಂಗಳೂರು ಉತ್ತರದಲ್ಲಿ ಶಾಸಕ ಮೊಯಿದಿನ್‌ ಬಾವಾ ಅವರು ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಾವಾ ಮತ್ತೆ ಆಯ್ಕೆಯಾಗುವುದು ಖಚಿತ ಎಂದರು. ಹ್ಯಾರಿಸ್‌ ಬೈಕಂಪಾಡಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next