Advertisement

JDS ನಿಖಿಲ್‌ ಮೇಲೂ ಕೇಸ್‌ಗೆ ಚರ್ಚೆ: ಎಚ್‌.ಡಿ.ಕುಮಾರಸ್ವಾಮಿ ಕಿಡಿ

10:29 PM Jul 13, 2024 | Team Udayavani |

ಬೆಂಗಳೂರು: ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಎಲ್ಲರನ್ನೂ ಮುಗಿಸಿದ್ದೇವೆ. ನಿಖಿಲ್‌ ಒಬ್ಬ ಉಳಿದಿದ್ದಾನೆ. ಅವನನ್ನೂ ರಾಮನಗರದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎ1 ಆರೋಪಿ ಮಾಡಲು ಹೊರಟ್ಟಿದಿರಾ? ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊನ್ನೆ ರಾಮನಗರದಲ್ಲಿ ನಡೆದ ಪ್ರತಿಭಟನೆ ಬಗ್ಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿರುದ್ಧ ಕೇಸ್‌ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ. ಸಚಿವರು ಹೇಳಿದ್ದಾರೆ ಎಂದು ಡಿಜಿಪಿ ಏನು ಮಾಡಲು ಹೊರಟಿದ್ದೀರಿ? ನಮ್ಮ ರಾಜ್ಯದ ಡಿಜಿಪಿ ಒಬ್ಬ ಕಾನ್ಸ್‌ಟೇಬಲ್‌ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಡಿಜಿಪಿಯವರು ತಮ್ಮ ಕಚೇರಿಯನ್ನು ಪೇದೆ ಕಚೇರಿ ಮಾಡಿದ್ದಾರೆ. ಡಿಜಿಪಿ ಕೆಲಸ ಮಾಡುತ್ತಾ ಇದ್ದೀರಾ ಅಥವಾ ಪೇದೆ ಕೆಲಸ ಮಾಡ್ತಾ ಇದ್ದೀರಾ ಎಂದು ಡಿಜಿಪಿ ವಿರುದ್ಧ ವಾಗ್ಧಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌, ವಿಧಾನ ಪರಿಷತ್‌ ಸದಸ್ಯರಾದ ಭೋಜೇಗೌಡ, ಟಿ.ಎ.ಶರವಣ, ಶಾಸಕ ಶರಭಣಗೌಡ ಕಂದಕೂರ, ಪಕ್ಷದ ಹಿರಿಯ ಮುಖಂಡರಾದ ಪ್ರಕಾಶ್‌, ರವೀಶ್‌ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next