Advertisement

Renukaswamy ಪತ್ನಿಗೆ ನೌಕರಿ ಸಂಬಂಧ ಸಿಎಂ ಜತೆ ಚರ್ಚೆ: ಪರಮೇಶ್ವರ್‌

12:33 AM Jun 19, 2024 | Team Udayavani |

ಚಿತ್ರದುರ್ಗ: ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಜೀವನ ಸಾಗಿಸಲು ಅವರ ಪತ್ನಿಗೆ ಸರಕಾರಿ ಉದ್ಯೋಗ ಕೊಡಬೇಕು ಎಂಬುದು ಮೃತರ ಕುಟುಂಬದವರ ಬೇಡಿಕೆಯಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಭರವಸೆ ನೀಡಿದರು.

Advertisement

ನಗರದ ತುರುವನೂರು ರಸ್ತೆಯ ವಿಆರ್‌ಎಸ್‌ ಬಡಾವಣೆಯಲ್ಲಿರುವ ಮೃತ ರೇಣುಕಸ್ವಾಮಿ ಮನೆಗೆ ಮಂಗಳವಾರ ಭೇಟಿ ನೀಡಿ ತಂದೆ-ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿದ ಅನಂತರ ಮಾತನಾಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸುಮಾರು 17 ಮಂದಿಯನ್ನು ಬಂ ಧಿಸಲಾಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತದೆ. ಯಾರು ಕೂಡ ಈ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸಲ್ಲದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ತನಿಖೆ ಅಗತ್ಯವಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next