Advertisement

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜತೆ ಚರ್ಚೆ: ಪ್ರಲ್ಹಾದ್ ಜೋಶಿ

01:18 PM Jul 28, 2022 | Team Udayavani |

ಬೆಂಗಳೂರು/ಹೊಸದಿಲ್ಲಿ: ಪಿಎಫ್ ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ ಎಂದರು.

ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಸಿಎಂ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ:ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಇಬ್ಬರ ಬಂಧನ

ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next