Advertisement

ಫೇಸ್‌ಬುಕ್‌ನಲ್ಲಿ ಅವಹೇಳನ: ಇಬ್ಬರ ಬಂಧನ

07:45 AM Dec 17, 2017 | Team Udayavani |

ಸಾಗರ: ಸಾಮಾಜಿಕ ಜಾಲತಾಣಗಳಲ್ಲಿ ಹೊಸನಗರದ ರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಹಾಗೂ ಅವಹೇಳನಕಾರಿಯಾಗಿ ಬಿಂಬಿಸಿ ಸಂದೇಶಗಳನ್ನು ಹಾಕುತ್ತಿದ್ದ ಇಬ್ಬರನ್ನು ಸಾಗರ ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ. 

Advertisement

ತಾಲೂಕಿನ ಜಿ.ಆರ್‌. ಗಣಪತಿ ಭಟ್‌ ಜಿಗಳೇಮನೆ, ನಿರಂಜನ ಕುಗ್ವೆ ಬಂಧಿತರು. ಸತ್ಯಶೋಧ ಮಿತ್ರ ಮಂಡಳಿ ಎಂಬ ಫೇಸ್‌ಬುಕ್‌ ಗ್ರೂಪ್‌ನ ಅಡ್ಮಿನ್‌ ಆಗಿರುವ ಗಣಪತಿ ಭಟ್‌ ಹೊಸನಗರದ ರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಬಿಂಬಿಸಿ ಅವಹೇಳನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದರು. ಇದನ್ನು ಗಮನಿಸಿದ ತಾರಾ ಎಂಬುವವರು ಸಾಗರ ಗ್ರಾಮಾಂತರ ಠಾಣೆಗೆ ದೂರಿತ್ತಿದ್ದರು. ಸೆ. 13ರಂದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶನಿವಾರ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next