Advertisement

ಅತೃಪ್ತರು ಬರುವ ವಿಶ್ವಾಸ ಇದೆ: ಈಶ್ವರ್‌ ಖಂಡ್ರೆ

12:30 AM Feb 05, 2019 | |

ಬೆಂಗಳೂರು: ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅತೃಪ್ತ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತೃಪ್ತ ಶಾಸಕರು ಪಕ್ಷದ ನಾಯಕರ ಜತೆ ಸಂಪರ್ಕದಲ್ಲಿದ್ದಾರೆ. ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಉಮೇಶ್‌ ಜಾಧವ್‌ ಜತೆಗೆ ಮಾತನಾಡಿದ್ದೇನೆ. ಬಿಜೆಪಿಯವರು ಸಾಕಷ್ಟು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಹೊಂದಾಣಿಕೆ ಆಗುವುದಿಲ್ಲ. ಅತೃಪ್ತರೇನು ವಿದೇಶಕ್ಕೆ ಹೋಗಿಲ್ಲ. ಅವರ ಸ್ನೇಹಿತರ ಜೊತೆಗೆ ಹೋಗಿದ್ದಾರೆ. ಕ್ಷೇತ್ರದ ಜನರ ಜತೆಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next