Advertisement

ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಮಾರಾಟ

03:35 AM Jun 29, 2017 | Team Udayavani |

ಬೆಳ್ತಂಗಡಿ: ತೆಕ್ಕಾರು, ಬಾರ್ಯ, ಪುತ್ತಿಲ ಗ್ರಾಮದ ರೈತರ ಕೃಷಿ ಕಾರ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಯಂತ್ರಗಳ ಪ್ರದರ್ಶನ ಮೇಳವು ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮೂರುಗೋಳಿ, ಸ್ಪಂದನ ರೈತರ ಸೇವಾ ಕೂಟ ಬಾರ್ಯ ಮತ್ತು ಗ್ರಾ.ಪಂ. ಬಾರ್ಯ ಇದರ ಸಹಯೋಗ
ದೊಂದಿಗೆ ಬಾರ್ಯ ಗ್ರಾ.ಪಂ. ಸಭಾಂಗಣದಲ್ಲಿ  ನಡೆಯಿತು.

Advertisement

ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್‌ ಪೈ ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ಕೃಷಿ ಚಟುವಟಿಕೆಗಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದರೂ ಗ್ರಾಮೀಣ ಭಾಗದ ರೈತರಿಗೆ ಮಾಹಿತಿಯ ಕೊರತೆಯಿಂದಾಗಿ ತಲುಪುತ್ತಿಲ್ಲ.  ಇಲಾಖಾ ಸಹಾಯಧನವನ್ನು ರೈತರಿಗೆ ಮುಟ್ಟಿಸುವ ಉದ್ದೇಶದಿಂದ ಈ ಇದನ್ನು  ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ. ಆರ್‌. ಸುಬ್ರಹ್ಮಣ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ, ಪ್ರಗತಿಪರ ಕೃಷಿಕ ಪ್ರಸನ್ನ ಗೌಡ ಎನ್‌., ತೆಕ್ಕಾರು ಪ್ರಗತಿಪರ ಕೃಷಿಕ ಪಾಂಡುರಂಗ ನಾಯಕ್‌, ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕ್‌ನ 
ನಿರ್ದೇಶಕ ಜಯರಾಜ್‌ಹೆಗ್ಡೆ ಪುತ್ತಿಲ, ಬ್ಯಾಂಕಿನ ಕಾರ್ಯ ನಿರ್ವಹಣಾಧಿಕಾರಿ ಸತೀಶ್‌, ಸ್ಪಂದನ ರೈತರ ಸೇವಾ ಕೂಟದ ಅಧ್ಯಕ್ಷ ವಿವೇಕಾನಂದ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.

ಸಹಕಾರಿ ಸಂಘದ ಉಪಾಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಸ್ವಾಗತಿಸಿ, ಮಂಜುನಾಥ ಸಾಲ್ಯಾನ್‌ ಕಾರ್ಯಕ್ರಮ ನಿರ್ವಹಿಸಿ, ಸೇವಾ ಕೂಟದ ಕಾರ್ಯದರ್ಶಿ ಗಣೇಶ್‌ ಪಿ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next