Advertisement

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

01:51 AM Jun 25, 2024 | Team Udayavani |

ಹೈದರಾಬಾದ್‌: ತೆಲಂಗಾಣದ ನಾಗರಕರ್ನೂಲ್‌ ಜಿಲ್ಲೆಯಲ್ಲಿ 26 ವರ್ಷದ ಆದಿವಾಸಿ ಮಹಿಳೆಗೆ ಹೊಡೆದು, ಕಣ್ಣಿಗೆ, ಖಾಸಗಿ ಭಾಗಕ್ಕೆ ಮೆಣಸಿನ ಪುಡಿ ಹಾಕಿ ಅಮಾನುಷವಾಗಿ ದೌರ್ಜನ್ಯವೆಸಗಲಾಗಿದೆ. ವ್ಯಕ್ತಿಯೊಬ್ಬನ ಬಳಿ ಸಂತ್ರಸ್ಥೆ ಸಾಲ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಆತನ ತೋಟದಲ್ಲಿ ಕೆಲಸ ಮಾಡಬೇಕಾಗಿತ್ತು. ಅನಂತರ ಮಹಿಳೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಕ್ಕೆ ವ್ಯಕ್ತಿ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ತೆಲಂಗಾಣ ಡಿಸಿಎಂ ಮಲ್ಲು ಭಟ್ಟಿ ವಿಕ್ರಮಾರ್ಕ ಸಂತ್ರಸ್ತೆಯನ್ನು ಭೇಟಿಯಾಗಿದ್ದು, ಆಕೆಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next