Advertisement

14 ಸೇನೆ ಶಾಸಕರಿಗೆ ಅನರ್ಹತೆ ನೋಟಿಸ್‌; ಆದಿತ್ಯ ಠಾಕ್ರೆಗಿಲ್ಲ!

11:07 PM Jul 05, 2022 | Team Udayavani |

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ನೂತನ ಸಿಎಂ ಏಕನಾಥ ಶಿಂಧೆ ಅವರು ವಿಶ್ವಾಸಮತ ಸಾಬೀತುಪಡಿಸುವ ವೇಳೆ ಪಕ್ಷದ ವಿಪ್‌ ಉಲ್ಲಂಘಿಸಿದ 14 ಮಂದಿ ಶಾಸಕರಿಗೆ ಮುಖ್ಯ ಸಚೇತಕ ಭರತ್‌ ಗೋಗಾವಾಲೆ ಅನರ್ಹತೆ ನೋಟಿಸ್‌ ನೀಡಿದ್ದಾರೆ.

Advertisement

ಆದರೆ, ಶಿಂಧೆ ವಿರುದ್ಧ ಮತ ಚಲಾಯಿಸಿದ ಶಾಸಕ ಆದಿತ್ಯ ಠಾಕ್ರೆ ಅವರಿಗೆ ಮಾತ್ರ ನೋಟಿಸ್‌ ನೀಡಿಲ್ಲ. ಬಾಳಾ ಸಾಹೇಬ್‌ ಠಾಕ್ರೆ ಅವರನ್ನು ನಾವು ಗೌರವಿಸುವ ಕಾರಣ, ಆದಿತ್ಯ ಅವರಿಗೆ ನೋಟಿಸ್‌ ಜಾರಿ ಮಾಡಿಲ್ಲ ಎಂದು ಚೀಫ್ ವಿಪ್‌ ಭರತ್‌ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ, ಸದ್ಯದಲ್ಲೇ ಮಹಾರಾಷ್ಟ್ರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಫ‌ಡ್ನವೀಸ್‌ ಮಂಗಳವಾರ ತಿಳಿಸಿದ್ದಾರೆ.

ಶಿಂಧೆ ಹೆಸರು ಸೂಚಿಸಿದ್ದೇ ನಾನು
ಉದ್ಧವ್‌ ವಿರುದ್ಧ ಬಂಡಾಯವೆದ್ದ ಏಕನಾಥ ಶಿಂಧೆ ಅವರನ್ನೇ ಸಿಎಂ ಮಾಡುವಂತೆ ಪಕ್ಷದ ಹೈಕಮಾಂಡ್‌ ಮುಂದೆ ಪ್ರಸ್ತಾಪಿಸಿದ್ದೇ ನಾನು ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ತಿಳಿಸಿದ್ದಾರೆ. ಮಂಗಳವಾರ ತಮ್ಮ ಹುಟ್ಟೂರು ನಾಗ್ಪುರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಾನು ಡಿಸಿಎಂ ಆಗಲು ಮಾನಸಿಕವಾಗಿ ಸಿದ್ಧನಿರಲಿಲ್ಲ. ಆದರೆ, ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆದ ಮೇಲೆ ಹಾಗೂ ಜೆಪಿ ನಡ್ಡಾ, ಅಮಿತ್‌ ಶಾ ಅವರು ಮಧ್ಯಪ್ರವೇಶಿಸಿದ ಬಳಿಕ ನನ್ನ ನಿರ್ಧಾರ ಬದಲಿಸಿಕೊಂಡೆ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next