Advertisement

Rahul Gandhi ಅನರ್ಹತೆ: ಪಣಜಿಯಲ್ಲಿ ಕಾಂಗ್ರೆಸ್ ಮುಖಂಡರ ಮೌನ ಸತ್ಯಾಗ್ರಹ

03:22 PM Jul 12, 2023 | Team Udayavani |

ಪಣಜಿ: ಮೋದಿ ಅಡ್ಡಹೆಸರಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿದೆ. ಲೋಕಸಭೆ ಸ್ಪೀಕರ್ ರಾಹುಲ್ ಗಾಂಧಿಯವರ ಸಂಸದೀಯ ಸ್ಥಾನವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ‘ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯವು ವಿಧಿಸಿದ್ದ ಎರಡು ವರ್ಷಗಳ ಶಿಕ್ಷೆಗೆ ತಡೆ ನೀಡಲು ನಿರಾಕರಿಸುವ ಮೂಲಕ ನ್ಯಾಯಾಲಯವು ಇತ್ತೀಚೆಗೆ ರಾಹುಲ್ ಗಾಂಧಿಯವರ ಮನವಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಗೋವಾ ಪ್ರದೇಶ ಕಾಂಗ್ರೆಸ್ ಪಣಜಿಯಲ್ಲಿ ಮೌನ ಸತ್ಯಾಗ್ರಹ ನಡೆಸಿದೆ.

Advertisement

ಪಣಜಿಯ ಆಜಾದ್ ಮೈದಾನದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಮೌನ ಸತ್ಯಾಗ್ರಹ ಆರಂಭವಾಯಿತು. ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್, ಶಾಸಕ ಕಾರ್ಲೋಸ್ ಫೆರೇರಾ, ವಿವಿಧ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೇಸ್ ನಾಯಕರು ಬಾಯಿಗೆ ಕಟ್ಟು ಪಟ್ಟಿ ಧರಿಸಿ ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

‘ಮೋದಿ ಉಪನಾಮ’ ಮಾನನಷ್ಟ ಮೊಕದ್ದಮೆಯಲ್ಲಿ ದಾಖಲಿಸಲಾದ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ ಸೂರತ್ ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದಾದ ಬಳಿಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸ್ಪೀಕರ್‍ಗಳು ಅನರ್ಹಗೊಳಿಸಿದ್ದಾರೆ. ಇದೇ ವೇಳೆ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಶುಕ್ರವಾರ ನಡೆದ ವಿಚಾರಣೆಯಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ರವರು ಪ್ರಧಾನಿ ನರೇಂದ್ರ ಮೋದಿ ರವರ ಉಪನಾಮದಲ್ಲಿ ಟೀಕೆಗಳನ್ನು ಮಾಡಿದ್ದರು. ಲಲಿತ್ ಮೋದಿಯಾಗಲಿ, ನೀರವ್ ಮೋದಿಯಾಗಲಿ ಅಥವಾ ನರೇಂದ್ರ ಮೋದಿಯಾಗಲಿ, ಕಳ್ಳರನ್ನೆಲ್ಲ ಮೋದಿ ಎಂದು ಹೆಸರಿಸುವುದು ಹೇಗೆ? ಅಂತಹ ಹೇಳಿಕೆಗಳನ್ನು ರಾಹಲ್ ಗಾಂಧಿ ನೀಡಿದ್ದರು.

ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನಂತರ ಲೋಕಸಭೆಯ ಸ್ಪೀಕರ್ ಗಳು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next