Advertisement

“ಅನರ್ಹರನ್ನು ಮತದಾರರೇ ಅರ್ಹ ಮಾಡಿದ್ದಾರೆ’

11:21 PM Dec 09, 2019 | Team Udayavani |

ಧಾರವಾಡ: ಉಪ ಚುನಾವಣೆಯಲ್ಲಿ ಮತದಾರರು ಅನರ್ಹರನ್ನು ಅರ್ಹರನ್ನಾಗಿ ಮಾಡಿದ್ದಾರೆ. ಮತದಾರರ ತೀರ್ಪಿಗೆ ನಾವು ಬದ್ಧರಾಗಿದ್ದೇವೆ ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷವನ್ನು ಮತದಾರರು ತಿರಸ್ಕಾರ ಮಾಡಿದ್ದಾರೆ.

Advertisement

ನಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡಿದ್ದರೆ ಇಂತಹ ಪರಿಸ್ಥಿತಿಯೇ ಬರುತ್ತಿರಲಿಲ್ಲ. ಸಮ್ಮಿಶ್ರ ಸರ್ಕಾರ ಮತ್ತೆ ಬಂದರೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಮತದಾರರು ಬಿಜೆಪಿಗೆ ಬಹುಮತ ನೀಡಿರಬಹುದು. ಬಿಜೆಪಿಗೆ ಬಹುಮತ ಸಿಗದಿದ್ದರೆ ಜೆಡಿಎಸ್‌ ಎರಡು ಹೋಳಾಗುತ್ತಿತ್ತು. ಆದರೆ ಈಗ ಬಿಜೆಪಿಗೆ ಬಹುಮತ ಸಿಕ್ಕಿರುವ ಕಾರಣ ಈ ಪ್ರಶ್ನೆಯೇ ಉದ್ಭವ ಆಗಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next