Advertisement

ಬೆಳೆ ಹಾನಿ ಪರಿಹಾರ ನೀಡಲು ನೀತಿ ಸಂಹಿತೆ ಅಡ್ಡಿ: ಸಚಿವ ಆರ್.ಅಶೋಕ್

12:47 PM Nov 18, 2021 | Team Udayavani |

ಚಿಕ್ಕಮಗಳೂರು : ಬೆಳೆ ಹಾನಿ ಪರಿಹಾರ ನೀಡಲು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಅನುಮತಿ ಕೇಳಿದ್ದೇನೆ, ಇಂದು ಇಲ್ಲ ನಾಳೆ ಹಣ ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಗುರುವಾರ  ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋಟ್ಯಂತರ ಹಣ ಬಿಡುಗಡೆ ಮಾಡಬೇಕು, ಅನುಮತಿ ಸಿಕ್ಕರೆ ಮಾಡುತ್ತೇನೆ. ಎಲ್ಲೆಲ್ಲಿ ನೆರೆ, ಬೆಳೆಹಾನಿಯಾಗಿದೆ ಅವರಿಗೆಲ್ಲಾ 100 ಪರ್ಸೆಂಟ್ ಪರಿಹಾರ ಕೊಡುತ್ತೇವೆ’ ಎಂದರು.

ಬೆಳೆ ಹಾನಿ ಸಮೀಕ್ಷೆಗೆ ರಾಜಕಾರಣಿಗಳನ್ನ ಕರೆದುಕೊಂಡು ಹೋಗಬೇಡಿ
‘ರಾಜಕಾರಣಿಗಳು, ಮಂತ್ರಿಗಳು, ಶಾಸಕರನ್ನ ಕರೆದುಕೊಂಡು ಹೋಗಬೇಡಿ. ನೀವು ಮಾತ್ರ ಹೋಗಿ ಬೆಳೆ ಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಿ’ ಎಂದು ಅಧಿಕಾರಿಗಳಿಗೆ ಸಚಿವ ಅಶೋಕ್ ಸೂಚನೆ ನೀಡಿದರು.

‘ಬೆಳಗಾವಿ, ಬಾಗಲಕೋಟೆ, ಹಾವೇರಿ, ಉತ್ತರಕನ್ನಡ, ಗದಗದಲ್ಲಿ ಹೆಚ್ಚಿನ ಹಾನಿ ಸಂಭವಿಸಿದ್ದು, ಬೆಳಗಾವಿಯಲ್ಲಿ 76 ಸಾವಿರ ರೈತರ ಬೆಳೆ ಹಾನಿ, ಬಾಗಲಕೋಟೆಯಲ್ಲಿ 20 ಸಾವಿರ ರೈತರ ಬೆಳೆ ಹಾನಿಯಾಗಿದೆ. ಇಂದು ಹಣ ಬಿಡುಗಡೆ ಮಾಡಬೇಕಿತ್ತು, ಆ ಫೈಲ್ ನನ್ನ ಬಳಿ ಬಂದಿದೆ’ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next