Advertisement

Udupi: ಹಣ್ಣಿನ ಅಂಗಡಿ ವ್ಯಾಪಾರಕ್ಕೆ ಅಡ್ಡಿ: ಆರೋಪ

12:22 AM Sep 08, 2023 | Team Udayavani |

ಉಡುಪಿ: ಇಂದ್ರಾಳಿ ಮಸೀದಿ ಮುಂಭಾಗ ಅನಧಿಕೃತವಾಗಿ ಹಣ್ಣಿನ ಅಂಗಡಿ ವ್ಯವಹಾರ ನಡೆಸಲಾಗುತ್ತಿದೆ ಎಂದು ವ್ಯಾಪಾರಿಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಯಶ್‌ಪಾಲ್‌ ಸುವರ್ಣ ವ್ಯಾಪಾರಿಯೊಂದಿಗೆ ಚರ್ಚಿಸಿದ್ದಾರೆ.

Advertisement

ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ನಗರಸಭೆ ಅಧಿಕಾರಿಗಳಿಂದ ಈ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಪೊಲೀಸ್‌ ಇಲಾಖೆ ಪರವಾನಿಗೆ ಕುರಿತು ಮಾಹಿತಿ ಕೇಳಿದ್ದಾರೆ. ಈ ಬಗ್ಗೆ ಯಾರಿಗೂ ಸಮಸ್ಯೆಯಾಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಎರಡೂ ಕಡೆಯ ವ್ಯಕ್ತಿಗಳನ್ನು ಕರೆಯುಸಿ ಸಮಸ್ಯೆ ಪರಿಹರಿಸುತ್ತೇವೆ ಎಂದು ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next