Advertisement

Ganesha Procession: ಗಣೇಶ ಮೆರವಣಿಗೆಗೆ ಅಡ್ಡಿ:ಹಿಂದೂ ಸಂಘಟನೆಗಳ ಪ್ರತಿಭಟನೆ

02:54 PM Oct 13, 2023 | Team Udayavani |

ದಾವಣಗೆರೆ: ನಗರದ ಬಸವರಾಜಪೇಟೆಯಲ್ಲಿ ಆ.13ರ ಗುರುವಾರ ರಾತ್ರಿ ಗಣೇಶೋತ್ಸವ ಮೆರವಣಿಗೆಗೆ ಅಡ್ಡಿಪಡಿಸಿದವರ ವಿರುದ್ಧ ಸೂಕ್ತ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಬಡಾವಣಾ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದವು.

Advertisement

ಮಹಾರಾಜರ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭ ಅನ್ಯ ಕೋಮಿನವರು ಅಡ್ಡಿಪಡಿಸಿದ್ದಾರೆ.

ನಮ್ಮ ಹಾದಿಯಲ್ಲಿ ಡಿ.ಜೆ. ಹಾಕುವಂತಿಲ್ಲ ಎಂದು ದೌರ್ಜನ್ಯವೆಸಗಿ ಮೆರವಣಿಗೆ ಬಂದ್ ಮಾಡಿಸಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಜಯದೇವ ವೃತ್ತದಿಂದ ಬಡಾವಣೆ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ದೌರ್ಜನ್ಯ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರನ್ನು ಬಂಧಿಸಿ ಗಡಿಪಾರು ಮಾಡಬೇಕು.  ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ಅಹವಾಲು ಆಲಿಸಬೇಕು ಎಂದು ಪಟ್ಟುಹಿಡಿದರು.

ಗಣೇಶ ಮೆರವಣಿಗೆಗೆ ಅಡ್ಡಿಪಡಿಸಿದವರ ಬದಲಿಗೆ ಮೆರವಣಿಗೆಯಲ್ಲಿದ್ದವರಿಗೇ ಥಳಿಸಿ, ಡಿಜೆ ಕಿತ್ತು ಹಾಕಿದಂತಹ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದರು.

Advertisement

ಕೆಲ ಸಮಯದ ನಂತರ ಪ್ರತಿಭಟನೆ ಸ್ಥಳಕ್ಕೆ ಬಂದ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಮನವಿ ಪತ್ರವನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next