Advertisement

ನೇತ್ರಾವತಿ ಸೇತುವೆ ತಡೆಬೇಲಿ ಕಾಮಗಾರಿಗೆ ಅಡ್ಡಿ: ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ

04:00 PM Jul 18, 2020 | keerthan |

ಉಳ್ಳಾಲ: ಇಲ್ಲಿನ ನೇತ್ರಾವತಿ ನದಿ ಸೇತುವೆಗೆ ನಡೆಯುತ್ತಿರುವ ತಡೆಬೇಲಿ ನಿರ್ಮಾಣ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಸೇತುವೆ ಮೇಲಿರಿಸಿದ್ದ ವೆಲ್ಡಿಂಗ್ ಮೆಷಿನ್ ನಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿದೆ.

Advertisement

ವೆಲ್ಡಿಂಗ್ ಮೆಷಿನ್ ನಲ್ಲಿ ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಆವರಿಸಿದ್ದು, ಸೇತುವೆ ಮೇಲೆ ದಟ್ಟ ಹೊಗೆ ಹಬ್ಬಿದೆ. ಸೇತುವೆಯ ಮೇಲೆ ಬೆಂಕಿ ಕಂಡು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.

ಉಳ್ಳಾಲ ನೇತ್ರಾವತಿ ನದಿ ಸೇತುವೆಯಲ್ಲಿ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವ ಉದ್ದೇಶದಿಂದ ಸೇತುವೆಗೆ ತಡೆಬೇಲಿ ನಿರ್ಮಾಣ ಮಾಡಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಕಂಕನಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next