Advertisement

ಗುಂಡಿ ಮುಚ್ಚಲು ಮತ್ತೆ ಮಳೆ ಅಡ್ಡಿ

10:21 AM Oct 13, 2017 | Team Udayavani |

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಕೆಲಸಕ್ಕೆ ಹಿನ್ನಡೆಯಾಗಿದ್ದು, ಮಳೆ ನಿಂತರೆ ಗಡುವಿನೊಳಗೆ ಗುಂಡಿಗಳನ್ನು ದುರಸ್ತಿಪಡಿಸಲಾಗುವುದು ಎಂದು ಮೇಯರ್‌ ಸಂಪತ್‌ರಾಜ್‌ ತಿಳಿಸಿದ್ದಾರೆ. 

Advertisement

ಗುರುವಾರ ಪಾಲಿಕೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರಸ್ತುತ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಯೋಜನೆಗಳ ಕುರಿತು ಹಾಗೂ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಗರದಲ್ಲಿ ರಸ್ತೆಗುಂಡಿಗಳ ಮುಚ್ಚಲು 15 ದಿನಗಳ ಗಡುವು ನೀಡಿದ್ದಾರೆ. ಆದರೆ, ನಗರದಲ್ಲಿ ಮತ್ತೆ ಮಳೆ ಆರಂಭವಾಗಿರುವುದರಿಂದ ವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಸತತ ಎರಡು ದಿನಗಳಿಂದ ಗುಂಡಿಗಳನ್ನು ಮುಚ್ಚಲಾಗುತ್ತಿದ್ದು, ಬುಧವಾರ ಮಳೆಯಾದರಿಂದ ರಾತ್ರಿ ಗುಂಡಿ ಮುಚ್ಚಲಾಗಿಲ್ಲ ಎಂದು ತಿಳಿಸಿದರು.

ಇದರೊಂದಿಗೆ ಕೋಲ್ಡ್‌ ಮಿಕ್ಸ್‌ ಮೂಲಕ ತಾತ್ಕಾಲಿಕವಾಗಿ ಗುಂಡಿ ಮುಚ್ಚಲು ನಿರ್ಧರಿಸಲಾಗಿತ್ತು. ಆದರೆ, ಗುಂಡಿಗಳಲ್ಲಿ ತೇವಾಂಶ ಹೆಚ್ಚಾಗಿರುವುದರಿಂದಾಗಿ ಕೋಲ್ಡ್‌ಮಿಕ್ಸ್‌ ಸಹ ಗುಂಡಿಗಳಲ್ಲಿ ಕೂಡಿಕೊಳ್ಳುತ್ತಿಲ್ಲ. ತೇವಾಂಶ ಹೆಚ್ಚಾಗಿರದ ಪ್ರದೇಶಗಳಲ್ಲಿ ಕೋಲ್ಡ್‌ಮಿಕ್ಸ್‌ ಬಳಸಿ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದರು. 

ಅಧಿಕಾರಿಗಳು ಪ್ರತ್ಯಕ್ಷಿಕೆಯ ಮೂಲಕ ನಗರದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದ್ದು, ಕಾಮಗಾರಿಗಳನ್ನು ವಿಳಂಬಗತಿಯಲ್ಲಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next