Advertisement
ಮಹಿಳಾ ವಾಣಿಜ್ಯೋದ್ಯಮಿಗಳ ಸಂಘಗಳ ಒಕ್ಕೂಟವು ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ರಾಷ್ಟ್ರೀಯ ಸುರಕ್ಷಿತ ನೀರು ಮತ್ತು ನೈರ್ಮಲ್ಯ’ ಸಮ್ಮೇಳನದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ ಎಂ. ವಿಶ್ವೇಶ್ವರಯ್ಯ ಅವರ ತವರು ಜಿಲ್ಲೆ ಕೋಲಾರದಲ್ಲಿ 2,500 ಕೆರೆಗಳಿವೆ. ಕೆರೆಗಳ ಜಲಾನಯನ ಪ್ರದೇಶ ಒತ್ತುವರಿಯಾಗಿ ನಾಶವಾಗುತ್ತಿದೆ. ಕೆರೆಯಲ್ಲಿ ಹೂಳು ತುಂಬಿವೆ.
Related Articles
Advertisement
ಮನೆ ಮನೆಗೆ ನಲ್ಲಿಗಳ ಮೂಲಕವೇ ನೀರು ಪೂರೈಸಬೇಕು. ಮೀಟರ್ ಅಳವಡಿಸಿದಾಗ ಮಾತ್ರ ನೀರನ್ನು ಮಿತವಾಗಿ ಬಳಸುತ್ತಾರೆ. ಕೇಂದ್ರ ಸರ್ಕಾರವು ನೀರಾವರಿ ಹಾಗೂ ಕುಡಿಯುವ ನೀರು ಪೂರೈಕೆಗಾಗಿ 3.68 ಲಕ್ಷ ಕೋಟಿ ರೂ. ಅನುದಾನವನ್ನು ಬಜೆಟ್ನಲ್ಲಿ ಕಾಯ್ದಿರಿಸಿದೆ. ಇದರಲ್ಲಿ ರಾಜ್ಯದ ಯೋಜನೆಗಳಿಗೆ ಶೇ. 50ರಷ್ಟು ಅನುದಾನ ಸಿಗಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ 48 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದರೂ ಜನ ಅವುಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸುತ್ತಿಲ್ಲ. ಸ್ಥಳೀಯ ಜನಪ್ರತಿನಿಧಿಗಳ ಸಹಯೋಗದಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲರಿಗೂ ಶುದ್ದ ಕುಡಿಯುವ ನೀರು ಹಾಗೂ ನೈರ್ಮಲ್ಯ ಕಾಪಾಡುವತ್ತ ಅರಿವು ಮೂಡಿಸಲು ಶ್ರಮಿಸಬೇಕು ಎಂದು ಹೇಳಿದರು. ವಸತಿ ಸಚಿವ ವಿ.ಸೋಮಣ್ಣ, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಸಂಸ್ಥೆಯ ಅಧ್ಯಕ್ಷೆ ಐಶ್ಚರ್ಯ ನಂಜಪ್ಪ ಇತರರು ಉಪಸ್ಥಿತರಿದ್ದರು.