Advertisement

ಸಚಿವ ಸ್ಥಾನ ಆಕಾಂಕ್ಷಿಗಳ ತೀವ್ರ ಅಸಮಾಧಾನ ;ಬೆಂಬಲಿಗರ ಆತ್ಮಹತ್ಯೆ ಯತ್ನ

02:17 PM Dec 22, 2018 | Team Udayavani |

ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ  ಸಚಿವ ಸ್ಥಾನ ಸಿಗುವುದಿಲ್ಲ ಎನ್ನುವುದು ಖಾತ್ರಿಯಾದ ಬಳಿಕ ಕಾಂಗ್ರೆಸ್‌ನಲ್ಲಿ  ಅಸಮಾಧಾನ ಭುಗಿಲೆದ್ದಿದೆ. ಹಲವು ಶಾಸಕರು ಬಹಿರಂಗ ಅಸಮಾಧಾನ ಹೊರ ಹಾಕಿದ್ದು , ಇನ್ನೊಂದೆಡೆ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿ ಹೈಡ್ರಾಮಾ ಮಾಡಿದ್ದಾರೆ. 

Advertisement

ಹಿರೇಕೆರೂರಿನ ಮೂರು ಬಾರಿಯ ಶಾಸಕ ಬಿ.ಸಿ.ಪಾಟೀಲ್‌, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ,ಶಾಮನೂರು ಶಿವಶಂಕರಪ್ಪ,ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌, ಮೊದಲಾದವರು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ. 

ಜಾತಿವಾರು ಲೆಕ್ಕಾಚಾರದಲ್ಲಿ ಪ್ರಾಂತ್ಯವಾರು ಲೆಕ್ಕಾಚಾರದಲ್ಲಿ ಹಾವೇರಿ ಜಿಲ್ಲೆ ಲೆಕ್ಕಕ್ಕೇ ಇಲ್ಲದಂತಾಗಿದೆ ಎಂದು ಬಿ.ಸಿ.ಪಾಟೀಲ್‌ ಕಿಡಿ ಕಾರಿದ್ದಾರೆ. ಸಾದರ ಲಿಂಗಾಯತ ವರ್ಗಕ್ಕೆ ಸೇರಿದ ನನ್ನನ್ನು ಕಡೆಗಣಿಸಲಾಗಿದೆ. ಇದೇ ಮೊದಲ ಬಾರಿಗೆ ಸಾದರ ಲಿಂಗಾಯತದವರನ್ನು ಕಡೆಗಣಿಸಲಾಗಿದೆ ಎಂದಿದ್ದಾರೆ. 

ಎಚ್‌.ಕೆ.ಪಾಟೀಲ್‌ ಗೆ ಪ್ರಚಾರ ಸಮಿತಿ 
ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ  ಹಿರಿಯ ಶಾಸಕ ಎಚ್‌.ಕೆ .ಪಾಟೀಲ್‌ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್‌ ಅವರು ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಾರೆ. 

ಹೈಡ್ರಾಮಾ!
ಜೇವರ್ಗಿ ಶಾಸಕ ಅಜಯ್‌ಸಿಂಗ್‌ ಅವರ ಬೆಂಬಲಿಗ  ಜಿಲಾನಿ ಎನ್ನುವ ಯುವಕ  ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಸ್ಥಳದಲ್ಲಿದ್ದವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Advertisement

ಬಿ.ಸಿ.ಪಾಟೀಲ್‌ ಬೆಂಬಲಿಗನೆಂದು ಹೇಳಿಕೊಂಡು ಪುಟ್ಟೇಶ ಗೊರವರ ಎನ್ನುವ ಯುವಕ ನೀರಿನ ಟ್ಯಾಂಕ್‌ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಆತನನ್ನು ಸ್ಥಳದಲ್ಲಿದ್ದವರು ಮನವೊಲಿಸಿ ಕೆಳಗಿಳಿಸಿದ್ದಾರೆ ಎಂದು ತಿಳಿದು ಬಂದಿದೆ. 

Advertisement

Udayavani is now on Telegram. Click here to join our channel and stay updated with the latest news.

Next