Advertisement

ಬಿಎಸ್‌ವೈ ಪ್ರಮಾಣದ ಬಳಿಕವೇ ಅತೃಪ್ತರು ವಾಪಸ್‌

12:01 AM Jul 24, 2019 | Lakshmi GovindaRaj |

ಮುಂಬೈ: ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದ ಪತನಕ್ಕೆ ಕಾರಣವಾದ ಅತೃಪ್ತ ಶಾಸಕರು ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕವೇ ಮುಂಬೈನಿಂದ ಹೊರಡಲಿದ್ದಾರೆ ಎಂದು ಮುಂಬೈನಲ್ಲಿನ ಬಿಜೆಪಿ ಮೂಲಗಳು ತಿಳಿಸಿವೆ.

Advertisement

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರವು ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫ‌ಲವಾದ ವಿಷಯ ಗೊತ್ತಾಗುತ್ತಿದ್ದಂತೆ ಅತೃಪ್ತ ಶಾಸಕರು ಬಹಳ ಸಂತೋಷಪಟ್ಟಿದ್ದಾರೆ. ಅವರಿಗೆ ಏನು ಬೇಕಿತ್ತೋ, ಅದು ಸಿಕ್ಕಿದೆ. ಯಡಿಯೂರಪ್ಪ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ತಕ್ಷಣ ಈ ಶಾಸಕರು ರಾಜ್ಯಕ್ಕೆ ವಾಪಸಾಗಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಈ ಹಿಂದೆ, ತಮ್ಮ ರಾಜೀನಾಮೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಇದೇ ಅತೃಪ್ತ ಶಾಸಕರು ಹೇಳಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next