Advertisement

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಜೆಡಿಎಸ್‌ನಲ್ಲಿ ಭಿನ್ನಮತ ಸ್ಫೋಟ

08:46 PM Aug 08, 2021 | Team Udayavani |

ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹತ್ತಿರವಾಗುತ್ತಿದ್ದು, ಟಿಕೆಟ್‌ಗಾಗಿ ಜೆಡಿಎಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ವಿಧಾನ ಪರಿಷತ್‌ನ ಜೆಡಿಎಸ್‌ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ ಹಾಗೂ ಮರಿತಿಬ್ಬೇಗೌಡ ಇಬ್ಬರಿಗೂ ಪ್ರತಿಷ್ಠೆಯಾಗಿದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್‌ ಕೊಡಿಸಲು ಕಸರತ್ತು ನಡೆಸುತ್ತಿದ್ದಾರೆ

Advertisement

ಮರಿತಿಬ್ಬೇಗೌಡ ಶಿಕ್ಷಕರ ಕ್ಷೇತ್ರದ ಜೆಡಿಎಸ್‌ ಸದಸ್ಯ. ಕೆ.ಟಿ.ಶ್ರೀಕಂಠೇಗೌಡ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್‌ ಸದಸ್ಯರಾಗಿದ್ದಾರೆ. ಕೆ.ಟಿ.ಶ್ರೀಕಂಠೇಗೌಡ ಅವರ ಅವ ಧಿ ಮುಗಿಯುತ್ತಿದ್ದು, ಮತ್ತೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದರಿಂದ ಅವರ ಸ್ಥಾನಕ್ಕೆ ತಮ್ಮ ಬೆಂಬಲಿಗರಿಗೆ ಟಿಕೆಟ್‌ ಕೊಡಿಸಬೇಕೆಂಬ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಮುಂದಾಗಿದ್ದಾರೆ. ಶ್ರೀಕಂಠೇಗೌಡ ತಮ್ಮ ಬೆಂಬಲಿಗ ಮೈಸೂರು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್‌.ಕೆ.ರಾಮು ಪರ ಬ್ಯಾಟಿಂಗ್‌ ಬೀಸುತ್ತಿದ್ದರೆ, ಇತ್ತ ಮರಿತಿಬ್ಬೇಗೌಡ ತಮ್ಮ ಬೆಂಬಲಿಗ ಕೀಲಾರ ಜಯರಾಮು ಪರವಾಗಿ ಅಖಾಡಕ್ಕಿಳಿದಿದ್ದಾರೆ.

ಇದನ್ನೂ ಓದಿ:ಆಗಸ್ಟ್ 11 ದರ್ಶನ್ ಅವರಿಗೆ ವಿಶೇಷವಾದ ದಿನ : ಸಂಭ್ರಮಕ್ಕೆ ಸಜ್ಜಾಗಿದೆ ‘ಡಿ ಬಾಸ್’ ಪಡೆ  

ಶಿಕ್ಷಕರ ಕ್ಷೇತ್ರದ ಮೇಲೆ ಶ್ರೀಕಂಠೇಗೌಡ ಕಣ್ಣು?:
ಹಾಲಿ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಜೆಡಿಎಸ್‌ನೊಂದಿಗೆ ಮುನಿಸಿಕೊಂಡು ಕಾಂಗ್ರೆಸ್‌ ಸೇರುತ್ತಾರೆಂಬ ವದಂತಿ ಹಿನ್ನೆಲೆ ಜೆಡಿಎಸ್‌ನಿಂದ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಲು ಶ್ರೀಕಂಠೇಗೌಡ ಚಿಂತಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮರಿತಿಬ್ಬೇಗೌಡರು ನಾನು ಜೆಡಿಎಸ್‌ನಲ್ಲೇ ಉಳಿಯುತ್ತೇನೆಂಬ ಮಾತುಗಳನ್ನಾಡುತ್ತಿದ್ದಾರೆ. ಹೀಗಾಗಿ ಜೆಡಿಎಸ್‌ ವರಿಷ್ಠರು ಇಬ್ಬರಲ್ಲಿ ಯಾರ ಬೆಂಬಲಿಗರಿಗೆ ಟಿಕೆಟ್‌ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next