Advertisement

ರೈತರಿಗೆ ಸಮರ್ಪಕ ಗೊಬ್ಬರ ವಿತರಿಸಿ

03:34 PM Jul 12, 2022 | Team Udayavani |

ಜೇವರ್ಗಿ: ರೈತರಿಗೆ ಸಮರ್ಪಕ ಗೊಬ್ಬರ ಸಿಗುವಂತೆ ಒತ್ತಾಯಿಸಿ ಜೆಡಿಎಸ್‌ ನಗರ ಘಟಕದ ವತಿಯಿಂದ ಸೋಮವಾರ ಪಟ್ಟಣದ ಕೃಷಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Advertisement

ತಾಲೂಕಿನಲ್ಲಿ ಸಮರ್ಪಕ ಮಳೆಯಾಗಿದ್ದು, ತೊಗರಿ, ಹತ್ತಿ ಸೇರಿದಂತೆ ಮುಂಗಾರು ಬೆಳೆಗಳ ಬಿತ್ತನೆ ಆರಂಭವಾಗಿದೆ. ಆದರೆ, ರೈತರಿಗೆ ಸಮರ್ಪಕ ಡಿಎಪಿ ಗೊಬ್ಬರ ಸಿಗದೇ ಪರದಾಡುವಂತಾಗಿದೆ. ರೈತರಿಗೆ ಕಳೆದ ಐದಾರು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ, ಕೊರೊನಾ ಸೇರಿದಂತೆ ಒಂದಿಲ್ಲೊಂದು ಸಮಸ್ಯೆಗಳಿಂದ ಸಾಕಷ್ಟು ತೊಂದರೆಯಲ್ಲಿದ್ದಾರೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದ ಬಿತ್ತಿದ ಬೀಜ, ಗೊಬ್ಬರ ನೆಲಪಾಲಾಗಿದೆ. ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೃಷಿ ಇಲಾಖೆ ಅಧಿಕಾರಿ ಪವನಕುಮಾರ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಸ್‌.ಎಸ್‌. ಸಲಗರ, ಜಿಲ್ಲಾ ಉಪಾಧ್ಯಕ್ಷ ಶಂಕರ ಕಟ್ಟಿಸಂಗಾವಿ, ಜೆಡಿಎಸ್‌ ನಗರ ಘಟದ ಅಧ್ಯಕ್ಷ ರೌಫ ಹವಾಲ್ದಾರ್‌, ಮುಖಂಡರಾದ ಇಮ್ರಾನ್‌ ಇನಾಂದಾರ, ಶಬ್ಬೀರ ಇನಾಂದಾರ, ಬಬ್ಲು ಇನಾಂದಾರ, ಮಾಜೀದ್‌ ಪಟೇಲ, ಮುಖೀದ್‌ ಗುತ್ತೆದಾರ, ಮಹಿಬೂಬ್‌ ಗುತ್ತೆದಾರ, ಖಯೂಮ್‌ ಜಮಾದಾರ, ಬಾವೂದ್ದೀನ್‌ ಇನಾಮದಾರ, ಎಂ.ಡಿ. ಶಫಿಕ್‌, ಅಫ್ರೂಜ್‌ ಗುತ್ತೆದಾರ, ಭೀಮು ತಳವಾರ ಸೇರಿದಂತೆ ಜೆಡಿಎಸ್‌ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next